ಮೈಸೂರು : ಮಂಡ್ಯ ನಾಗಮಂಗಲ ಕೋಮು ಗಲಭೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರು ಅವರು ಎಷ್ಟೇ ಪ್ರಭಾವಿಗಳಾಗಿದ್ದರು ಅವರ ಮೇಲೆ ಕ್ರಮ ಆಗ್ಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರು, ಗೃಹ ಸಚಿವರು ಬಹಳ ಹಿರಿಯರಿದ್ದಾರೆ. ಅನುಭವಿಗಳು ಕೂಡ ಹೌದು. ಯಾವ ಕಾರಣಕ್ಕಾಗಿ ಇದನ್ನ ಸಣ್ಣ ಪ್ರಕರಣ ಅಂದ್ರೂ ನನಗೆ ಗೊತ್ತಾಗುತ್ತಿಲ್ಲ. ಮತಗಳ ಓಲೈಕೆ ರಾಜಕಾರಣ ಬಿಡಬೇಕು. ಎಲ್ಲದಕ್ಕಿಂತ ದೇಶ ಮುಖ್ಯವಾಗಿದೆ ಎಂದಿದ್ದಾರೆ.
ಗಣೇಶ ಮೂರ್ತಿ ನಮ್ಮ ಭಾವನೆಗಳ ಸಂಕೇತ. ಅದರ ಮೆರವಣಿಗೆಗೆ ಅಡ್ಡಿಯಾಗದಂತೆ ಇಂತಹ ಘಟನೆ ಮುಂದೆ ಜರುಗದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ಡಾ.ಜಿ ಪರಮೇಶ್ವರ್ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ : ಮುನಿರತ್ನ ವಿರುದ್ಧ ಐದು ಆಡಿಯೋ ರಿಲೀಸ್ ಮಾಡಿದ ಬಿಬಿಎಂಪಿ ಕಾಂಟ್ರಾಕ್ಟರ್..
Post Views: 21