Download Our App

Follow us

Home » ಜಿಲ್ಲೆ » ನಾಗಮಂಗಲ ಇನ್ನೂ ಬೂದಿ ಮುಚ್ಚಿದ ಕೆಂಡ – ನಾಳೆವರೆಗೂ ನಿಷೇಧಾಜ್ಞೆ ಮುಂದುವರೆಸಿದ ಜಿಲ್ಲಾಡಳಿತ..!

ನಾಗಮಂಗಲ ಇನ್ನೂ ಬೂದಿ ಮುಚ್ಚಿದ ಕೆಂಡ – ನಾಳೆವರೆಗೂ ನಿಷೇಧಾಜ್ಞೆ ಮುಂದುವರೆಸಿದ ಜಿಲ್ಲಾಡಳಿತ..!

ಮಂಡ್ಯ : ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿ, ನಲುಗಿ ಹೋಗಿರುವ ನಾಗಮಂಗಲದಲ್ಲಿ ಪ್ರಸ್ತುತದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕರಣ ಸಂಬಂಧ ಈವರೆಗೂ 54 ಮಂದಿಯನ್ನು ಬಂಧಿಸಲಾಗಿದೆ. ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆವರೆಗೂ ನಿಷೇಧಾಜ್ಞೆ (144 ಸೆಕ್ಷನ್) ಮುಂದುವರೆಸಿದೆ.

ಬಂಧಿತ 52 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿರಿಯ ಸಿವಿಲ್‌ ನ್ಯಾಯಾಧೀಶರು ಆದೇಶಿಸಿದ್ದಾರೆ. ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನ ಶಿಫ್ಟ್ ಮಾಡಲಾಗಿದೆ. ಗಲಭೆ ಕೇಸಲ್ಲಿ ಬಂಧನವಾಗಿರೋ ಆರೋಪಿಗಳ ಪೋಷಕರು, ನಾಗಮಂಗಲ ಕೋರ್ಟ್ ನಿನ್ನೆ ಮುಂದೆ ಜಮಾಯಿಸಿದ್ದರು. ಪತಿ, ಮಕ್ಕಳು ಜೈಲಿಗೆ ಹೋಗುತ್ತಿರುವುದನ್ನು ನೋಡಲಾಗದೆ ಕಣ್ಣೀರಿಟ್ಟಿದ್ದಾರೆ.

ಇನ್ನು, ನಾಗಮಂಗಲದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಹಲವು ಬಡಾವಣೆಗಳಲ್ಲಿ ಗಲಭೆ ಕೋರರಿಗೆ ಎಚ್ಚರಿಕೆ ರವಾನಿಸಿದ್ದಾರೆ. ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ KSRP ತುಕಡಿಗಳ ನಿಯೋಜನೆ ಮಾಡಲಾಗಿದೆ. ಸದ್ಯ ನಾಗಮಂಗಲ ಸಹಜ ಸ್ಥಿತಿಗೆ ಮರಳುತ್ತಿದೆ.

ಇಂದು ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ : ನಾಗಮಂಗಲ ಪಟ್ಟಣ ‌ಉದ್ವಿಗ್ನ ಹಿನ್ನೆಲೆ ನಿನ್ನೆ ಬಿಜೆಪಿ ನಿಯೋಗ ಭೇಟಿ ನೀಡಿತ್ತು. ಇವತ್ತು ಕೇಂದ್ರ ಸಚಿವ ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ. ಗಲಭೆ ನಡೆದ ದರ್ಗಾ ರಸ್ತೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಅಂಗಡಿ, ವಾಹನ ಕಳೆದುಕೊಂಡ ಸಂತ್ರಸ್ತರ ಜೊತೆ ಕೇಂದ್ರ ಸಚಿವರು ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಮದುವೆಯಾದ ಒಂದುವರೆ ವರ್ಷಕ್ಕೆ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಸಾವು..!

Leave a Comment

DG Ad

RELATED LATEST NEWS

Top Headlines

ವಿಕ್ಕಿ ಯಾವಾಗಲೂ ಹೇಗಿರ್ತಾರೆ ಗೊತ್ತಾ? – ದಾಂಪತ್ಯದ ಸೀಕ್ರೆಟ್ ರಿವೀಲ್ ಮಾಡಿದ ಕತ್ರಿನಾ ಕೈಫ್..!

ಮುಂಬೈ : ಬಾಲಿವುಡ್​ನ​ ಕ್ಯೂಟ್​ ಕಪಲ್​ಗಳಲ್ಲಿ ಕತ್ರಿನಾ ಕೈಫ್​​ ಮತ್ತು ವಿಕ್ಕಿ ಕೌಶಲ್​ ಕೂಡ ಒಬ್ಬರು. 2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಮುದ್ದಾದ ಜೋಡಿಯನ್ನು ಬಿಗ್

Live Cricket

Add Your Heading Text Here