Download Our App

Follow us

Home » ಅಪರಾಧ » ನಾಗೇಂದ್ರ ED ಕಸ್ಟಡಿ ನಾಳೆಗೆ ಅಂತ್ಯ – ಇಂದೇ ಹೋಟೆಲ್​​ಗೆ ಕರೆದೊಯ್ದು ಸ್ಥಳ ಮಹಜರ್ ಸಾಧ್ಯತೆ..!

ನಾಗೇಂದ್ರ ED ಕಸ್ಟಡಿ ನಾಳೆಗೆ ಅಂತ್ಯ – ಇಂದೇ ಹೋಟೆಲ್​​ಗೆ ಕರೆದೊಯ್ದು ಸ್ಥಳ ಮಹಜರ್ ಸಾಧ್ಯತೆ..!

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ED ಕಸ್ಟಡಿಯಲ್ಲಿರುವ ಮಾಜಿ ಸಚಿವ ನಾಗೇಂದ್ರರ ಕಸ್ಟಡಿ ಅಂತ್ಯಕ್ಕೆ ಒಂದೇ ದಿನ ಬಾಕಿ ಇರುವುದರಿಂದ ಇಂದೇ ನಾಗೇಂದ್ರರನ್ನು ಕರೆದೊಯ್ದು ಸ್ಥಳ ಮಹಜರ್ ಮಾಡುವ ಸಾಧ್ಯತೆಯಿದೆ.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿಂತೆ ಇ.ಡಿ ಬಂಧನದಲ್ಲಿರುವ ನಾಗೇಂದ್ರಗೆ ಅಧಿಕಾರಿಗಳು ಫುಲ್ ಡ್ರಿಲ್ ಮಾಡ್ತಿದ್ದಾರೆ. ಅಧಿಕಾರಿಗಳ ಪ್ರಶ್ನೆಗೆ ನನಗೇನು ಗೊತ್ತಿಲ್ಲ ಅನ್ನೋ ವರಸೆಯನ್ನು ನಾಗೇಂದ್ರ ಮುಂದುವರಿಸಿದ್ದಾರಂತೆ. ಆದರೂ ಸಚಿವರಾಗಿದ್ದ ವೇಳೆ PAಗಳಾಗಿದ್ದ ದೇವೇಂದ್ರಪ್ಪ, ಹರೀಶ್ ವಿಚಾರಣೆ ವೇಳೆ ನೀಡಿರುವ ಹೇಳಿಕೆಯ ಆಧಾರದ ಮೇಲೆ ಅಧಿಕಾರಿಗಳು ವಿಚಾರಣೆ ನಡೆಸ್ತಿದ್ದಾರೆ.

ಇನ್ನು ಬಿ.ನಾಗೇಂದ್ರ ಶಾಂಗ್ರಿಲಾ ಹೋಟೆಲ್​​ನಲ್ಲಿ ನಿಗಮದ MD ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್​​​ ಜೊತೆ ರಹಸ್ಯ ಸಭೆ ಮಾಡಿದ್ದ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಸಭೆ ನಡೆದಿದ್ದ ಹೋಟೆಲ್​​ಗೆ ED ಅಧಿಕಾರಿಗಳು ನಾಗೇಂದ್ರರನ್ನು ಕರೆದೊಯ್ದು ಮಹಜರ್ ಮಾಡುವ ​ಸಾಧ್ಯತೆಯಿದೆ.

ಇದನ್ನೂ ಓದಿ : ಭರ್ಜರಿ ಮಳೆಯಿಂದ ಕಾವೇರಿಗೆ ಜೀವಕಳೆ – ಇಂದು KRS ಡ್ಯಾಂ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here