Download Our App

Follow us

Home » ರಾಜ್ಯ » ಜಯನಗರದಲ್ಲಿ ನಾರಾಯಣ ಮೂರ್ತಿ ದಂಪತಿ ಮತದಾನ : ತಪ್ಪದೇ ವೋಟ್ ಮಾಡಲು ಮನವಿ ಮಾಡಿದ ರಾಹುಲ್​ ದ್ರಾವಿಡ್..!

ಜಯನಗರದಲ್ಲಿ ನಾರಾಯಣ ಮೂರ್ತಿ ದಂಪತಿ ಮತದಾನ : ತಪ್ಪದೇ ವೋಟ್ ಮಾಡಲು ಮನವಿ ಮಾಡಿದ ರಾಹುಲ್​ ದ್ರಾವಿಡ್..!

ಬೆಂಗಳೂರು : ಲೋಕಸಭಾ ಚುನಾವಣೆ- ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಬೆಂಗಳೂರಿನಲ್ಲಿ ಈಗಾಗಲೇ ಆರಂಭವಾಗಿದ್ದು, ಮತದಾರರು ಪ್ರಜಾಪ್ರಭುತ್ವದ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ಇದೀಗ ಉದ್ಯಮಿಗಳಾದ ನಾರಾಯಣ ಮೂರ್ತಿ, ಸುಧಾಮೂರ್ತಿ, ಕ್ರಿಕೆಟಿಗ ರಾಹುಲ್​ ದ್ರಾವಿಡ್​, ಹಾಗೇಯೇ ಅನೇಕ ಸೆಲೆಬ್ರಿಟಿಗಳು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಸುಧಾಮೂರ್ತಿ : ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ ಸುಧಾಮೂರ್ತಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಭಾರತೀಯ ವಿದ್ಯಾ ಸಂಸ್ಥೆ ಮತಗಟ್ಟೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸುಧಾಮೂರ್ತಿ, ಮತದಾನ ಶ್ರೇಷ್ಠ ದಾನ. ಎಲ್ಲರಿಗೂ ಹೇಳುತ್ತಿದ್ದೇನೆ ಮತದಾನ ಮಾಡಿ ಅಂತ ಮನವಿ ಮಾಡಿದರು. ಯುವ ಸಮೂಹ ಮತ ಹಾಕಲು‌ ಮುಂದೆ ಬರಬೇಕು. ಮತದಾನ ಮಾಡಿ ಅಭಿಪ್ರಾಯ ತಿಳಿಸಬೇಕು. ಹೆಚ್ಚೆಚ್ಚು ಜನ ಮತದಾನ ಮಾಡಬೇಕು. ನಮ್ಮಂತಹ ಹಿರಿಯರು ಕ್ಯೂ ನಲ್ಲಿ ನಿಂತು ಮತದಾನ ಮಾಡ್ತಾರೆ. ಯುವಕರು ಕೂಡ ಮಾಡಬೇಕು ಎಂದು ಮನವಿ ಮಾಡಿದರು.

ರಾಹುಲ್ ದ್ರಾವಿಡ್ :  ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕುಟುಂಬ ಸಮೇತ ಆಗಮಿಸಿ ಮಲ್ಲೇಶ್ವರಂ ಶಿಕ್ಷಾ ಸ್ಕೂಲ್ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ‘ ದಯವಿಟ್ಟು ಎಲ್ಲರೂ ಮತದಾನ ಮಾಡಿ. ಪ್ರಜಾಪ್ರಭುತ್ವ ಮುಂದೆ ತರುವ ಅವಕಾಶ ಇದು. ಮತ ಚಲಾವಣೆ ನಮ್ಮ ಸಾಂವಿಧಾನಿಕ ಹಕ್ಕಾಗಿದ್ದು, ಹಕ್ಕು ಚಲಾಯಿಸಲು ಎಲ್ಲರೂ ಮನೆಯಿಂದ ಹೊರ ಬನ್ನಿ ಎಂದು ಮನವಿ ಮಾಡಿದ್ದಾರೆ.

ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ : ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಹಾಗೂ ಪತ್ನಿಯಾದ ಶ್ರೀಮತಿ ಮನಿಕಾ ಗಿರಿ ನಾಥ್ ರವರು ಇಂದು ಬೆಳಗ್ಗೆ 7.40ಕ್ಕೆ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

ಇದನ್ನೂ ಓದಿ : ಬೆಂಗಳೂರು : ಮಹಿಳೆಯರ ಮತದಾನಕ್ಕೆ ಉತ್ತೇಜನ ನೀಡಲು ಸಿದ್ದಗೊಂಡಿವೆ ಪಿಂಕ್‌ ಬೂತ್​ಗಳು..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here