ನೆಲಮಂಗಲ: ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ನಗರದ ಅರಿಶಿನಕುಂಟೆ ಬಳಿ ನಡೆದಿದೆ. ಅರುಣ್ ಕುಮಾರ್ ಎಂಬುವರಿಗೆ ಸೇರಿದ ಜ್ಯುಪಿಟರ್ ಸ್ಕೂಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಜ್ಯುಪಿಟರ್ ಸ್ಕೂಟರ್ನಲ್ಲಿ ಅರುಣ್ ಕುಮಾರ್ ದಾಸನಪುರದಿಂದ ನೆಲಮಂಗಲಕ್ಕೆ ಬರುತ್ತಿದ್ದರು. ಈ ವೇಳೆ ನೋಡ ನೋಡ್ತಿದ್ದಂತೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ರಸ್ತೆ ಮಧ್ಯೆನೇ ಧಗಧಗನೆ ಹೊತ್ತಿ ಉರಿದಿದೆ. ಇನ್ನೂ ಸ್ಕೂಟರ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ : ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!
Post Views: 68