Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹ*ಲ್ಲೆ – ಹೊಯ್ಸಳ ಜೀಪ್ ಗಾಜು ಪುಡಿ ಪುಡಿ..!

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹ*ಲ್ಲೆ – ಹೊಯ್ಸಳ ಜೀಪ್ ಗಾಜು ಪುಡಿ ಪುಡಿ..!

ಬೆಂಗಳೂರು : ಡ್ರಗ್‌ ಪೆಡ್ಲರ್‌ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಸಿಸಿಬಿ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನೈಜೀರಿಯಾ ಪ್ರಜೆಗಳಿಂದ‌ ಸಿಸಿಬಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ರಾತ್ರಿ 12 ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಡ್ರಗ್ ಪೆಡ್ಲರ್ ಇರುವಿಕೆ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು ಪರಿಶೀಲನೆಗೆ ತೆರಳಿದ್ದರು.

ಈ ವೇಳೆ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ. ಪೊಲೀಸರ ಜೀಪ್ ಜಖಂ ಮಾಡಿದ್ದಾರೆ. ಸಿಸಿಬಿ ಒಂದು ಜೀಪ್, ರಾಜಾನುಕುಂಟೆ ಪೊಲೀಸ್ ಠಾಣೆಯ ಹೊಯ್ಸಳ ಜೀಪ್ ಗಾಜು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಐದಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿಬ್ಬಂದಿಗಳ ಆರೋಗ್ಯ ವಿಚಾರಸಿದ್ದಾರೆ.

ಮಾವಳ್ಳಿಪುರದ ಮನೆಯೊಂದರಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಸಿಬಿ ಪೊಲೀಸರು ಪರಿಶೀಲನೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾದ ನೈಜೀರಿಯಾ ಪ್ರಜೆಗಳು, ಸಿಸಿಬಿ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ತಕ್ಷಣ ಸಿಸಿಬಿ ಪೊಲೀಸರು 112ಗೆ ಕರೆ ಮಾಡಿದ್ದು, ಕರೆ ಮಾಡಿದ ಕೂಡಲೇ ಘಟನಾ ಸ್ಥಳಕ್ಕೆ  ರಾಜಾನುಕುಂಟೆ ಹೊಯ್ಸಳ ಸಿಬ್ಬಂದಿ ಆಗಮಿಸಿದ್ದಾರೆ. ಆ ವೇಳೆ ಹೊಯ್ಸಳ ಸಿಬ್ಬಂದಿ ಮೇಲೆಯೂ ನೈಜೀರಿಯಾ ಪ್ರಜೆಗಳು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ : ಪೃಥ್ವಿ ಅಂಬಾರ್ ಹೊಸ ಸಿನಿಮಾ ಅನೌನ್ಸ್ – ರಥಾವರ ಡೈರೆಕ್ಟರ್ ಜೊತೆ ದಿಯಾ ಹೀರೋ ಮೆರವಣಿಗೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here