Download Our App

Follow us

Home » ರಾಜಕೀಯ » ಜನಾರ್ದನ ರೆಡ್ಡಿ BJPಗೆ ಬಂದರೆ ಅಭ್ಯಂತರವಿಲ್ಲ; ಶ್ರೀರಾಮುಲು

ಜನಾರ್ದನ ರೆಡ್ಡಿ BJPಗೆ ಬಂದರೆ ಅಭ್ಯಂತರವಿಲ್ಲ; ಶ್ರೀರಾಮುಲು

ವಿಜಯನಗರ : ಜನಾರ್ದನ ರೆಡ್ಡಿ ನಮ್ಮನ್ನು ಬೆಳೆಸಿದವರು ಅವರು ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

G Janardhana Reddy: ಗದಗದ ಶ್ರೀರಾಮುಲು ಮನೆಯಲ್ಲಿ ಜನಾರ್ದನ ರೆಡ್ಡಿ ಪ್ರತ್ಯಕ್ಷ; ಗೊಂದಲಗಳಿಗೆ ಇತಿಶ್ರೀ | Vijaya Karnataka

ವಿಜಯನಗರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಜನಾರ್ದನ ರೆಡ್ಡಿ ಬಿಜೆಪಿಗೆ ಬಂದ್ರೆ ಸ್ವಾಗತ ಮಾಡುತ್ತೇನೆ. ರೆಡ್ಡಿ ಬಿಜೆಪಿಗೆ ಬರುತ್ತೇನೆ ಅಂದರೆ ನನ್ನ ಅಭ್ಯಂತರ ಇಲ್ಲ, ಜನಾರ್ದನ ರೆಡ್ಡಿ ನನ್ನ ಬೆಳೆಸಿದ್ದಷ್ಟೇ ಅಲ್ಲ, ನನಗೆ ಅನ್ನ ಕೊಟ್ಟವರು. ನನ್ನ ಮೇಲೆ ಜನಾರ್ದನ ರೆಡ್ಡಿಯ ಅನ್ನದ ಋಣವಿದೆ ಎಂದಿದ್ದಾರೆ.

ಇನ್ನೂ ಇದೇ ವೇಳೆ ರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರ ಗೈರು ವಿಚಾರದ ಬಗ್ಗೆ ಮಾತನಾಡಿದ ಮಾಜಿ ಸಚಿವ ಶ್ರೀ ರಾಮುಲು  ರಾಮಂದಿರ ಧ್ವಂಸ ಮಾಡಿದ ಬಾಬರ್ ಸಮಾಧಿಗೆ ಕೈ ಮುಗಿಯುತ್ತಾರೆ, ಪ್ರಭು ಶ್ರೀರಾಮ ಚಂದ್ರನ್ನ ವಿರೋಧ ಮಾಡುತ್ತಾರೆ. ನೆಹರುನಿಂದ ಇಂದಿನ ರಾಹುಲ್ ಗಾಂಧಿವರೆಗೂ ರಾಮನನ್ನ ವಿರೋಧ ಮಾಡುತ್ತಾ ಬಂದಿದ್ದಾರೆ.

ಅಂದು ಸೋಮನಾಥ ದೇಗುಲಕ್ಕೆ ವಿರೋಧ ಮಾಡಿದಂತೆ, ಇಂದು ರಾಮಮಂದಿರ ಬಹಿಷ್ಕಾರ ಮಾಡ್ತಿದ್ದಾರೆ.  ಹಿಂದೂ ವಿರೋಧಿ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ, ರಾಮಂದಿರದಿಂದ ಮೋದಿಗೆ ಹೆಸರು ಬರುತ್ತೆ ಅಂತ ಕಾಂಗ್ರೆಸ್ ಡೋಂಗಿ ರಾಜಕಾರಣ ಮಾಡ್ತಿದೆ. ಇದನ್ನ ಸಾಕ್ಷಾತ್ ಪ್ರಭು ಶ್ರೀರಾಮ ಚಂದ್ರನೇ ನಂಬುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕುಮಾರಣ್ಣನ ಕಾಲಿಗೆ ಬಿದ್ದು ಧನ್ಯವಾದ ಹೇಳಿದ ಸಂಸದ ಪ್ರತಾಪ್​ ಸಿಂಹ..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here