Download Our App

Follow us

Home » ರಾಜ್ಯ » ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇದುವರೆಗೆ ಯಾರನ್ನೂ ಬಂಧಿಸಿಲ್ಲ – NIA ಸ್ಪಷ್ಟನೆ..!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಇದುವರೆಗೆ ಯಾರನ್ನೂ ಬಂಧಿಸಿಲ್ಲ – NIA ಸ್ಪಷ್ಟನೆ..!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾ.1ರಂದು ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು NIA ಸ್ಪಷ್ಟನೆ ನೀಡಿದೆ.

ಬಳ್ಳಾರಿ ಮೂಲದ ವ್ಯಕ್ತಿಯನ್ನ ಬಂಧನ ಮಾಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಹಿನ್ನಲೆ ಇದೀಗ ಮಾಧ್ಯಮಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಯಾರನ್ನೂ ಬಂಧಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಎನ್​ಐಎ ಅಧಿಕಾರಿಗಳಿಂದ ತನಿಖೆ ಚುರುಕು : ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳ ತಂಡ 5 ಮಾರ್ಚ್​ 2024ರಂದು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ‌ ತನಿಖೆ ಆರಂಭಿಸಿತ್ತು. ಎನ್ಐಎ ಎಸ್.ಪಿ ನೇತೃತ್ವದ ಮೂವರು ಅಧಿಕಾರಿಗಳು ಸ್ಥಳ ಮಹಜರು ಕೂಡ ನಡೆಸಿದ್ದರು. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ NIA ಘೋಷಣೆ ಮಾಡಿದೆ. ಶಂಕಿತ ಆಂಧ್ರ ಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸದ್ಯ ಆತನ ಬಂಧನಕ್ಕೆ ಪೊಲೀಸರು ವಿವಿಧ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

ಇದನ್ನೂ ಓದಿ : ಬೆಂಗಳೂರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಹ*ತ್ಯೆ : ಮೃತದೇಹವನ್ನು ಕಾರಿನಲ್ಲಿರಿಸಿ ಪರಾರಿಯಾದ ದುಷ್ಕರ್ಮಿಗಳು..!

Leave a Comment

DG Ad

RELATED LATEST NEWS

Top Headlines

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರಕ್ಕೆ ಚಾಲನೆ..!

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ

Live Cricket

Add Your Heading Text Here