ಬೆಂಗಳೂರು : ನೆಲಮಂಗಲದಲ್ಲಿ ಕುಖ್ಯಾತ ಮನೆಗಳ್ಳನನ್ನು ಟೌನ್ ಪೊಲೀಸರು ಬೇಟೆಯಾಡಿದ್ದಾರೆ. ಆತನಿಂದ ಬರೋಬ್ಬರಿ 25 ಲಕ್ಷ ಮೌಲ್ಯದ 531 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಕೋಲಾರದ ಬಂಗಾರಪೇಟೆ ಮೂಲದ ಸೈಯದ್ ಅಹಮದ್ ಬಂಧಿತ ಆರೋಪಿಯಾಗಿದ್ದಾನೆ. ಈ ಖತರ್ನಾಕ್ ಕಳ್ಳ ಬೀಗ ಹಾಕಿರುವ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ.
ಈತ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಯಲ್ಲಿ 45ಕ್ಕೂ ಹೆಚ್ಚು ಮನೆಗಳ್ಳತನ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಚಿನ್ನಾಭರಣ ಕಳೆದುಕೊಂಡವರಿಗೆ ವಾಪಸ್ ನೀಡಲಾಗಿದೆ.
ಇದನ್ನೂ ಓದಿ : ವಾಟರ್ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಲು ಮುಂದಾದ ಬಿಬಿಎಂಪಿ..!
Post Views: 406