ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಬಿಬಿಎಂಪಿ, ಬಿಡಬ್ಲುಎಸ್ ಎಸ್ ಬಿ ಹಾಗೂ ಬಿಡಿಎ ಅಧಿಕಾರಿಗಳು ಸಾಥ್ ನೀಡಲಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನಿಡಲಿದ್ದಾರೆ.
ಮೈಸೂರು ರಸ್ತೆಯ ಗಾಳಿ ಆಂಜನೇಯ ದೇವಾಲಯ, ನಾಯಂಡಹಳ್ಳಿ ಜಂಕ್ಷನ್, ಸಾರಕ್ಕಿ ಜಂಕ್ಷನ್, ಬನಶಂಕರಿ ಜಂಕ್ಷನ್, ರಾಗಿಗುಡ್ಡ ಜಂಕ್ಷನ್ಗೆ ಭೇಟಿ ನೀಡಿ ಸಿಎಂ ಪರಿಶೀಲಿಸಲಿದ್ದಾರೆ.
ಇನ್ನು, ಹೊರ ವರ್ತುಲ ರಸ್ತೆಯ ವೇಗಾ ಸಿಟಿ ಮಾಲ್ ಜಂಕ್ಷನ್, ಹೊಸೂರು ರೋಡ್, ಕೇಂದ್ರ ಸಿಲ್ಕ್ ಜಂಕ್ಷನ್, HSR ಬಡಾವಣೆ, ಬೆಳ್ಳಂದೂರು ಸೇತುವೆ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ. ನಿನ್ನೆಯಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ಕೈಗೋಂಡಿದ್ದರು. ರಾಜಕಾಲುವೆಗಳ ಕುರಿತು ಅಧಿಕಾರಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದರು. ಡಿಸಿಎಂ ಡಿ.ಕೆ. ಶಿವಕುಮಾರ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಹ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ.
ಇದನ್ನೂ ಓದಿ : ಜಾನುವಾರು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಯುವಕ ಸಾ*ವು..!