ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್ ಮಾಡಲಾಗಿದೆ.
ಇದರ ಬೆನ್ನಲ್ಲೇ ಇದೀಗ ಚುನಾವಣಾಧಿಕಾರಿಗಳು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನೆಲಮಂಗಲ ಟೋಲ್ ಬಳಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 302 ಕಕ್ಕರ್ಗಳನ್ನು ಸೀಜ್ ಮಾಡಿದ್ದಾರೆ.
ನೆಲಮಂಗಲದ ಜಾಸ್ ಟೋಲ್ ಚೆಕ್ ಪೋಸ್ಟ್ನಲ್ಲಿ ಕುಕ್ಕರ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕುಕ್ಕರ್ಗಳನ್ನು ಮತದಾರರಿಗೆ ಹಂಚಲು ಸಾಗಿಸುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಗೆ ಸಾಗುತಿದ್ದ ಕ್ಯಾಂಟರ್ ವಾಹನದಲ್ಲಿ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಕುಕ್ಕರ್ ಸಾಗಿಸಲಾಗುತ್ತಿತ್ತು. FST ಟೀಮ್ನ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಕ್ಯಾಂಟರ್ ಡ್ರೈವರ್ ಈರಣ್ಣನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಎರಡನೇ ಹಂತದ ಎಲೆಕ್ಷನ್ಗೆ ನಾಮಪತ್ರಗಳ ಭರಾಟೆ – ಲೋಕ ಅಖಾಡಕ್ಕೆ ಧುಮುಕಿದ ಕೋಟ್ಯಾಧಿಪತಿಗಳು..!