ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ನಿನ್ನೆ ಬೆಳ್ಳಂಬೆಳಗ್ಗೆ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಬೆಳಗಿನ ಜಾವ 3 ಗಂಟೆಯಿಂದ ಸತತ ಎರಡು ಗಂಟೆಗಳ ಕಾಲ ಜಡಿದ ಮಳೆಗೆ ನಗರದ ಪ್ರಮುಖ ಭಾಗಗಳು ಜಲಾವೃತವಾಗಿತ್ತು. ಆದರೀಗ ಮುಂದಿನ 4 ದಿನ ಕೂಡ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ದೊರೆತಿದೆ. ಹವಾಮಾನ ಇಲಾಖೆ ಮಳೆ ಬರಲಿದೆ ಎಂದು ಮಾಹಿತಿ ಹಂಚಿಕೊಂಡಿದೆ.
ಸಿಲಿಕಾನ್ ಸಿಟಿಯಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಆಗಸ್ಟ್ 16ರವರೆಗೆ ಗುಡುಗು ಮಿಂಚು ಸಹಿತ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಇನ್ನು ನಾಲ್ಕು ದಿನ ಮೋಡ ಕವಿದ ವಾತಾವರಣ ವಿರಲಿದ್ದು, ಮಧ್ಯಾಹ್ನದ ನಂತರ ಮಿಡ್ನೈಟ್ವರೆಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗಾಗಿ ಹವಾಮಾನ ಇಲಾಖೆ ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.
ನಿನ್ನೆ ಬೆಳಗ್ಗೆ ಸುರಿದ ಮಳೆಯಿಂದಾಗಿ ಬ್ರ್ಯಾಂಡ್ ಬೆಂಗಳೂರಿನ ಚಿತ್ರಣವೇ ಬದಲಾಗಿತ್ತು. ನೀರು ಇಂಗಿ ಹೋಗಲು ಜಾಗವಿಲ್ಲದೆ, ರಾಜ ಕಾಳುವೆಯಲ್ಲಿ ಸರಿಯಾಗಿ ನೀರು ಹರಿಯದೆ ರಸ್ತೆ ತುಂಬೆಲ್ಲಾ ನೀರು ನಿಂತಿತ್ತು. ಆದರೀಗ ಮುಂದಿನ 4 ದಿನ ಸತತ ಮಳೆಯಾದರೆ ಬೆಂಗಳೂರಿನ ಪರಿಸ್ಥಿತಿ ಬಗ್ಗೆ ಜನರು ಯೋಚಿಸಬೇಕಾಗಿದೆ.
ಇದನ್ನೂ ಓದಿ : ಸಿಎಂ ಸಿದ್ದು ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲು..!