Download Our App

Follow us

Home » ರಾಜಕೀಯ » ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಪ್ರಕರಣ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು..!

ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಪ್ರಕರಣ : ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು..!

ಬೆಂಗಳೂರು : ಶಕ್ತಿಸೌಧದೊಳಗೆ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ವಿಪಕ್ಷನಾಯಕ ಆರ್​. ಅಶೋಕ್​ ನೇತೃತ್ವದಲ್ಲಿ ದೂರು ನೀಡಿದ್ದು, ಕಾಂಗ್ರೆಸ್​ ಸರ್ಕಾರ ವಜಾಕ್ಕೆ ಬಿಜೆಪಿ ನಿಯೋಗ ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕ ಆರ್.‌ಅಶೋಕ್ ನೇತೃತ್ವದಲ್ಲಿ ಬಿಜೆಪಿ‌ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್​.ಅಶೋಕ್​​, ಶ್ರೀನಿವಾಸ್ ಪೂಜಾರಿ, ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ‌ ಮಾಡಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಘಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಹೊಣೆ ಎಂದು ಉಲ್ಲೇಖ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ಆರ್ ಅಶೋಕ್ ಸೇರಿದಂತೆ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ವೇಳೆ ಆರ್.ಅಶೋಕ್ ಮಾತನಾಡಿ, ಈ ಘಟನೆಯಿಂದ ರಾಜ್ಯಪಾಲರಿಗೂ ಆಘಾತವಾಗಿದೆ. ವರದಿ ಪಡೆದು ಕೇಂದ್ರಕ್ಕೆ ಕಳಿಸ್ತೀನಿ ಎಂದಿದ್ದಾರೆ ಅಂತಾ ಹೇಳಿದ್ದಾರೆ. 

ಇದನ್ನೂ ಓದಿ : ಅಭಿಮಾನಿಯ ಕಾಲಿನ ಮೇಲೆ ಹರಿದ ಯಶ್ ಬೆಂಗಾವಲು ಪಡೆ ವಾಹನ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here