ಕಲಬುರಗಿ : ಶಹಾಬಾದ್ ತಾಲ್ಲೂಕಿನ ಮರತೂರ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಲಂಚ ಪಡೆಯುವಾಗಲೇ ಲೋಕಾ ಅಧಿಕಾರಿಗಳು ರೇಡ್ ಮಾಡಿದ್ದು, ಪರಶುರಾಮ್ ರಾಥೋಡ್ ಎಂಬುವರಿಂದ ಮ್ಯುಟೇಷನ್ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಸಿಕ್ಕಿ ಬಿದ್ದಿದ್ದಾರೆ.
ನಗರದ ಲಾಲಗೇರಿ ಕ್ರಾಸ್ ಹೋಟೆಲ್ ಬಳಿ ದಾಳಿ ಮಾಡಿದ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇನಾಳ ನೇತೃತ್ವದ ತಂಡ, ಅಶೋಕ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ : ರಾಯಚೂರಿನ ಕೃಷ್ಣಾ ನದಿಯಲ್ಲಿ ರಾಮಲಲ್ಲಾನ ಮೂರ್ತಿಯನ್ನೇ ಹೋಲುವ ವಿಗ್ರಹಗಳು ಪತ್ತೆ..!
Post Views: 457