Download Our App

Follow us

Home » ಜಿಲ್ಲೆ » ಮದುವೆಗೆ ನಿರಾಕರಿಸಿದ ಪೋಷಕರು : ವಿ*ಷ ಸೇವಿಸಿ ಆ*ತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳು, ಪ್ರಿಯಕರ ಸಾ*ವು..!

ಮದುವೆಗೆ ನಿರಾಕರಿಸಿದ ಪೋಷಕರು : ವಿ*ಷ ಸೇವಿಸಿ ಆ*ತ್ಮಹ*ತ್ಯೆಗೆ ಯತ್ನಿಸಿದ ಪ್ರೇಮಿಗಳು, ಪ್ರಿಯಕರ ಸಾ*ವು..!

ಹಾಸನ : ಮದುವೆಗೆ ಪೋಷಕರು ನಿರಾಕರಿಸಿದ್ದಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಲ್ಲಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವಿಗೀಡಾಗಿದ್ದಾನೆ. ಹೊಳೆನರಸಿಪುರ ತಾಲ್ಲೂಕಿನ ನಗರನಹಳ್ಳಿ ಗ್ರಾಮದ 24 ವರ್ಷದ ರಾಜು ಮೃತ ದುರ್ದೈವಿಯಾಗಿದ್ದಾನೆ.

ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆಯನ್ನು ಮೃತ ಯುವಕ ಪ್ರೀತಿಸುತ್ತಿದ್ದ. ಯವತಿ ಅಪ್ರಾಪ್ತೆ ಎನ್ನುವ ಕಾರಣಕ್ಕೆ ಪೋಷಕರು ಮದುವೆಗೆ ನಿರಾಕರಿಸಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ  ಪ್ರೇಮಿಗಳು ಒಟ್ಟಿಗೆ ವಿಷ ಸೇವಿಸಿ, ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿಯ ರೈಲ್ವೇ ಹಳಿ ಮೇಲೆ ಮಲಗಿದ್ದರು. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ತಮ್ಮ ಜೀಪ್‌ನಲ್ಲೇ ಇಬ್ಬರನ್ನೂ ಕರೆತಂದು ಪಟ್ಟಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪ್ರೇಮಿಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಬೆಂಗಳೂರಿನಲ್ಲಿ ಪಾರ್ಕಿಂಗ್ ವಿಚಾರಕ್ಕೆ ಟೆಕ್ಕಿ ದಂಪತಿಗಳ ಮೇಲೆ ಹಲ್ಲೆ- 3 ಆರೋಪಿಗಳು ಅರೆಸ್ಟ್..! 

 

 

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here