ಬೆಂಗಳೂರು : ಮೆಟ್ರೋ ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ಇರುವ ಹಿನ್ನೆಲೆ ಜೂನ್ 17ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಮೂಲಕ ಬಿಎಂಆರ್ಸಿಎಲ್ ತಿಳಿಸಿದೆ.
ಕಾಮಗಾರಿ ನಡೆಯಲಿರುವುದರಿಂದ ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ (ಜೂನ್ 17) ಸೋಮವಾರದಂದು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಸ್ಥಗಿತಗೊಳ್ಳಲಿವೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 1ಗಂಟೆಯ ಬಳಿಕ ಚಲ್ಲಘಟ್ಟ ಟು ವೈಟ್ಫೀಲ್ಡ್ ನಡುವೆ ಮೆಟ್ರೋ ಸಂಚಾರ ಪ್ರಯಾಣಕರಿಗೆ ಲಭ್ಯವಿರಲಿದೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ. ಪ್ರಯಾಣಿಕರ ಅನಾನುಕೂಲಕ್ಕೆ ವಿಷಾದಿಸುತ್ತೇವೆಂದು ಬಿಎಂಆರ್ ಸಿಎಲ್ ತಿಳಿಸಿದೆ.
ಇನ್ನೂ ಭಾನುವಾರ (ಜೂನ್ 16) ಯುಪಿಎಸ್ಸಿ ಪ್ರಾಥಮಿಕ ಸುತ್ತಿನ ಪರೀಕ್ಷೆ ಇರುವುದರಿಂದ ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಎಲ್ಲಾ ನಿಲ್ದಾಣಗಳಿಂದ ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ರೈಲು ಸೇವೆ ಆರಂಭವಾಗಲಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರದ ನಾಲ್ಕೂ ದಿಕ್ಕುಗಳಲ್ಲಿ ಬೆಳಗ್ಗೆ ಏಳು ಗಂಟೆ ಬದಲಾಗಿ ಆರು ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.
ಇದನ್ನೂ ಓದಿ : ರೇಣುಕಾಸ್ವಾಮಿ ಹತ್ಯೆ ಕೇಸ್ : ಪೊಲೀಸರೆದುರು ಶರಣಾಗಿದ್ದ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾ*ವು..!