ವಿಜಯಪುರ : ಅಕ್ರಮವಾಗಿ ಅಕ್ಕಿ ಸಂಗ್ರಹಿಸಿದ ಅಡ್ಡೆಯ ಮೇಲೆ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕರ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಶ್ಯಾಡ ಗ್ರಾಮದಲ್ಲಿ ನಡೆದಿದೆ.
ಘಟನೆ ಸಂಬಂಧ ತೆಗ್ಗಿಹಳ್ಳಿ ಗ್ರಾಮದ ಹಣಮಂತರಾಯಗೌಡ ಪಾಟೀಲ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಅಕ್ರಮವಾಗಿ ಶಿರಶ್ಯಾಡ ಗ್ರಾಮದಲ್ಲಿರುವ ಜಮೀನಿನಲ್ಲಿ ಅಕ್ರಮವಾಗಿ ಶೆಡ್ನಲ್ಲಿ ಪಡಿತರ ಅಕ್ಕಿಯಾದ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿದ್ದರು. ಪೊಲೀಸರು ದಾಳಿ ನಡೆಸಿ 1,89,290 ಮೌಲ್ಯದ 8230 ಕೆಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ವಾಹನ ಸಮೇತ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೊನೆಗೂ ಫ್ಲೈಟ್ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ – ಬೆಂಗಳೂರಿಗೆ ಯಾವಾಗ ಬರ್ತಾರೆ?
Post Views: 65