ಚಿಕ್ಕಬಳ್ಳಾಪುರ : ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೊಲೀಸ್ ಪೇದೆಯೊಬ್ಬ ವಂಚಿಸಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಇವರಿಬ್ಬರು ಚಿಕ್ಕಬಳ್ಳಾಪುರ ಮುನಿಸಿಪಾಲ್ ಕಾಲೇಜಿನಲ್ಲಿ ಕರೆಸ್ಪಾಂಡೆನ್ಸ್ನಲ್ಲಿ ಪದವಿ ಮಾಡುತ್ತಿದ್ದರು. ಕಾಲೇಜಿನಲ್ಲಿ ಇಬ್ಬರಿಗೂ ಪರಿಚಯವಾದ ಬಳಿಕ ಪ್ರೇಮಕ್ಕೆ ತಿರುಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ದೈಹಿಕ ಸಂರ್ಪಕ ಬೆಳೆಸಿದ್ದ. ಆದರೆ ಮದುವೆ ಆಗು ಅಂದರೆ ಅಂತರ್ಜಾತಿ ಎಂಬ ನೆಪವೊಡ್ಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ.
ಇದರಿಂದ ಮನನೊಂದ ಯುವತಿ ಶಿರಿಷಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಸುದ್ದಿ ಕೇಳಿ ಪೊಲೀಸ್ ಪೇದೆ ತಿಮ್ಮಣ್ಣ ರಾಮಪ್ಪಭೂಸರೆಡ್ಡಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸ್ ಪೇದೆ ಹಾಗೂ ಯುವತಿ ಶಿರಿಷಾ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ : ‘ಮೈ ಹೀರೋ’ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಹಾಲಿವುಡ್ ನಟ ಎರಿಕ್ ರಾಬರ್ಟ್ಸ್ – ಆ.30ಕ್ಕೆ ಸಿನಿಮಾ ರಿಲೀಸ್..!