ಕಲಬುರಗಿ : ರೌಡಿಶೀಟರ್ ಖಲೀಲ್ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಆಝಾದ್ಪುರ ರೋಡ್ ಹತ್ತಿರ ನಡೆದಿದೆ. ಪ್ರಮುಖ ಆರೋಪಿ ಯಾದುಲ್ಲ ಕಾಲೋನಿಯ ನಿವಾಸಿ ಸಯ್ಯದ್ ಕೌಸರ್(40) ಎಂದು ತಿಳಿದುಬಂದಿದೆ.
ಸಯ್ಯದ್ ಕೌಸರ್ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ. ವಿವಿ ಪೊಲೀಸ್ ಠಾಣೆಯ ವ್ಯಾಪ್ತಿಯ ಇಬ್ಬರು ಕಾನ್ಸ್ಟೇಬಲ್ ಸಿಬ್ಬಂದಿ ನಿನ್ನೆ ಆರೋಪಿಯನ್ನು ಬಂಧಿಸಲು ಹೋದಾಗ, ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ತಮ್ಮ ಜೀವ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಯಾಸೀನ್ ಮತ್ತು ಸಂಜೀವ್ ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆರೋಪಿಯ ಕಾಲಿಗೆ ಗುಂಡು ತಾಗಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ : ದೈತ್ಯ ಹೆಬ್ಬಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ – ವಿಡಿಯೋ ವೈರಲ್..!
Post Views: 53