Download Our App

Follow us

Home » ರಾಜಕೀಯ » ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸು – ಅಮಿತ್ ಶಾ ಆಹ್ವಾನದ ಮೇರೆಗೆ ಇಂದು ದೆಹಲಿಗೆ ತೆರಳಲಿರುವ ಹೆಚ್‌ಡಿಕೆ…!

ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸು – ಅಮಿತ್ ಶಾ ಆಹ್ವಾನದ ಮೇರೆಗೆ ಇಂದು ದೆಹಲಿಗೆ ತೆರಳಲಿರುವ ಹೆಚ್‌ಡಿಕೆ…!

ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗಳಿಸಿ ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಎನ್​ಡಿಎ ನಾಯಕರ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ಮಿತ್ರಪಕ್ಷ ಜೆಡಿಎಸ್‌ಗೆ ಕೇಂದ್ರ ಸಚಿವ ಅಮಿತ್ ಶಾ ಆಹ್ವಾನ ನೀಡಿದ್ದಾರೆ.

ಹೀಗಾಗಿ ಮಂಡ್ಯ ಕ್ಷೇತ್ರದಲ್ಲಿ ಭಾರೀ ಅಂತರಿಂದ ಗೆದ್ದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ.ಕುಮಾರಸ್ವಾಮಿ ಇಂದು ದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ ಅಮಿತ್ ಶಾ, ನಡ್ಡಾ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ನೂತನವಾಗಿ ಆಯ್ಕೆ ಆಗಿರುವ ಮಿತ್ರ ಪಕ್ಷಗಳ ಸಂಸದರನ್ನು ದೆಹಲಿಗೆ ಆಹ್ವಾನಿಸಲಾಗಿದೆ.

ಇಂದು ಬೆಳಗ್ಗೆ ಹತ್ತು ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಕುಮಾರಸ್ವಾಮಿ ಪ್ರಯಾಣ ಬೆಳೆಸಲಿದ್ದಾರೆ. ನಿರೀಕ್ಷಿತ ಪ್ರಮಾಣದ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿರುವ ಬಿಜೆಪಿ ನಾಯಕರು, ಎನ್‌ಡಿ‌ಎ ನಾಯಕರ ಮಹತ್ವದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜೆಡಿಎಸ್, ಮಂಡ್ಯ ಮತ್ತು ಕೋಲಾರದಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ಗೆದ್ದಿದೆ : ಡಿಸಿಎಂ ಡಿಕೆಶಿ..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here