ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಈ ಬೆನ್ನಲೇ ಪ್ರಜ್ವಲ್ಗೆ ವಿದೇಶಾಂಗ ಇಲಾಖೆಯಿಂದ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಪ್ರಜ್ವಲ್ಗೆ ವಿದೇಶಾಂಗ ಇಲಾಖೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮೊದಲು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಡಿಪ್ಲೊಮ್ಯಾಟಿಕ್ ಪಾಸ್ಪೋರ್ಟ್ ರದ್ದು ಕೋರಿ ಪತ್ರ ಬಂದಿದ್ದು, ವಿದೇಶಾಂಗ ಇಲಾಖೆಗೆ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಕೇಸ್ಗಳ ಬಗ್ಗೆ SIT ಮಾಹಿತಿ ನೀಡಿತ್ತು.
ಈಗಾಗಲೇ SIT ಪತ್ರದ ಬೆನ್ನಲ್ಲೇ ಪಾಸ್ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇದೀಗ ವಿದೇಶಾಂಗ ಇಲಾಖೆ ಶೋಕಾಸ್ ನೋಟಿಸ್ ನೀಡುವ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತೊಂದು ದೊಡ್ಡ ಶಾಕ್ ಕೊಟ್ಟಿದೆ.
ಇದನ್ನೂ ಓದಿ : ಕರ್ನಾಟಕದಲ್ಲಿ ಪ್ರತಿಷ್ಠಿತ “ROMEO PICTURES” ಮೂಲಕ ರಿಲೀಸ್ ಆಗಲಿದೆ “ಇಂಡಿಯನ್ 2” ಸಿನಿಮಾ…!