ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಲೀಕ್ ಮಾಡಿದವರ ಮೇಲೆ ದೂರು ಬರ್ಬೇಕು. ಯಾರಾದ್ರೂ ದೂರು ಕೊಟ್ಟರೆ SIT ಇದನ್ನೂ ಪರಿಗಣಿಸುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು , ಟರ್ಮ್ಸ್ ಆಫ್ ರೆಫರೆನ್ಸ್ SIT ಯಾವ ರೀತಿ ಮುಂದುವರೆಯುತ್ತೆ ನೋಡೋಣ. ಹೆಚ್ಡಿಕೆ ಆರೋಪದ ಬಗ್ಗೆ ಈಗಲೇ ಏನೂ ಹೇಳಲು ಆಗೋದಿಲ್ಲ. SIT ತನಿಖಾ ವರದಿ ಬಂದ ಮೇಲೆ ಸತ್ಯಾಸತ್ಯತೆ ಗೊತ್ತಾಗಲಿದೆ. SIT ವರದಿ ಬರೋವರೆಗೂ ಯಾರೂ ಹೇಳಿಕೆ ಕೊಡಬಾರದು ಎಂದು ತಿಳಿಸಿದ್ದಾರೆ.
ಇನ್ನು ಪ್ರಜ್ವಲ್ ವಾಪಸ್ ಕರೆಸಲು ಕೇಂದ್ರ ಸರ್ಕಾರದ ಸಹಕಾರ ಬೇಕು. ಯಾವ ಪ್ರೊಸಿಜರ್ ಮಾಡಬೇಕು ಅಂತಾ SIT ತನಿಖಾಧಿಕಾರಿಗಳು ನಿರ್ಧಾರ ಮಾಡ್ತಾರೆ. ನಿನ್ನೆ ಸಿಎಂ ಸಭೆಯಲ್ಲಿ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ತನಿಖೆಯಲ್ಲಿ ನಾವು ಯಾವುದೇ ಹಸ್ತಕ್ಷೇಪ ಮಾಡೋದಿಲ್ಲ. ಸಂತ್ರಸ್ತರಿಗೆ ನ್ಯಾಯ ಕೊಡಿಸೋ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : SIT ನೋಟಿಸ್ಗೆ ಪ್ರತಿಕ್ರಿಯಿಸಿದ ಹೆಚ್.ಡಿ.ರೇವಣ್ಣ – ಹೇಳಿದ್ದೇನು?