Download Our App

Follow us

Home » ರಾಜಕೀಯ » ಪ್ರಜ್ವಲ್ ಪೆನ್​​ಡ್ರೈವ್ ಕೇಸ್​​ನಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ – ಡಾ.ಜಿ.ಪರಮೇಶ್ವರ್..!

ಪ್ರಜ್ವಲ್ ಪೆನ್​​ಡ್ರೈವ್ ಕೇಸ್​​ನಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ – ಡಾ.ಜಿ.ಪರಮೇಶ್ವರ್..!

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಲೀಕ್​ ಮಾಡಿದವರ ಮೇಲೆ ದೂರು ಬರ್ಬೇಕು. ಯಾರಾದ್ರೂ ದೂರು ಕೊಟ್ಟರೆ SIT ಇದನ್ನೂ ಪರಿಗಣಿಸುತ್ತೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು , ಟರ್ಮ್ಸ್ ಆಫ್ ರೆಫರೆನ್ಸ್ SIT ಯಾವ ರೀತಿ ಮುಂದುವರೆಯುತ್ತೆ ನೋಡೋಣ. ಹೆಚ್​ಡಿಕೆ ಆರೋಪದ ಬಗ್ಗೆ ಈಗಲೇ ಏನೂ ಹೇಳಲು ಆಗೋದಿಲ್ಲ.  SIT ತನಿಖಾ ವರದಿ ಬಂದ ಮೇಲೆ ಸತ್ಯಾಸತ್ಯತೆ ಗೊತ್ತಾಗಲಿದೆ. SIT ವರದಿ ಬರೋವರೆಗೂ ಯಾರೂ ಹೇಳಿಕೆ ಕೊಡಬಾರದು ಎಂದು ತಿಳಿಸಿದ್ದಾರೆ.

ಇನ್ನು ಪ್ರಜ್ವಲ್​ ​ವಾಪಸ್ ಕರೆಸಲು ಕೇಂದ್ರ ಸರ್ಕಾರದ ಸಹಕಾರ ಬೇಕು. ಯಾವ ಪ್ರೊಸಿಜರ್​ ಮಾಡಬೇಕು ಅಂತಾ SIT ತನಿಖಾಧಿಕಾರಿಗಳು ನಿರ್ಧಾರ ಮಾಡ್ತಾರೆ. ನಿನ್ನೆ ಸಿಎಂ ಸಭೆಯಲ್ಲಿ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ತನಿಖೆಯಲ್ಲಿ ನಾವು ಯಾವುದೇ ಹಸ್ತಕ್ಷೇಪ ಮಾಡೋದಿಲ್ಲ. ಸಂತ್ರಸ್ತರಿಗೆ ನ್ಯಾಯ ಕೊಡಿಸೋ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : SIT ನೋಟಿಸ್​ಗೆ ಪ್ರತಿಕ್ರಿಯಿಸಿದ ಹೆಚ್​.ಡಿ.ರೇವಣ್ಣ – ಹೇಳಿದ್ದೇನು?

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here