ಬೆಂಗಳೂರು : ಪ್ರಜ್ವಲ್ ಪೆನ್ಡ್ರೈವ್ ಕೇಸ್ ಬಗ್ಗೆ ಬಹಿರಂಗ ಹೇಳಿಕೆ ಕೊಡ್ಬೇಡಿ. SIT ತನಿಖೆ ಮಾಡ್ತಿದೆ. ಬಹಿರಂಗ ಹೇಳಿಕೆ ಕೊಟ್ಟರೆ ಕಠಿಣ ಕೈಗೊಳ್ಳುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಹೇಳಿಕೆ ಕೊಡದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪ್ರಜ್ವಲ್ ಪೆನ್ಡ್ರೈವ್ ಕೇಸ್ ಬಗ್ಗೆ ಬಹಿರಂಗ ಹೇಳಿಕೆ ಕೊಟ್ಟವರನ್ನು 41(a) ಪ್ರಕಾರ ಕರೆಸಿಕೊಂಡು ತನಿಖೆ ಮಾಡ್ತೇವೆ ಎಂದು ಹೇಳಿದ್ದಾರೆ.
ಇನ್ನು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದವರು. ಇದು ಸೂಕ್ಷ್ಮ ಪ್ರಕರಣ ಕುಮಾರಸ್ವಾಮಿ ಹೇಳಿಕೆ ಕೊಡಬಾರದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಬ್ಯಾಟು ಬಾಲು ಹಿಡಿದು ಕ್ರಿಕೆಟ್ ಆಡಲು ರೆಡಿ ಎಂದ ಕ್ವೀನ್ಸ್ : ಕಿರುತೆರೆ ಹಾಗೂ ಹಿರಿತೆರೆ ಹೆಣ್ಮಕ್ಕಳಿಗಾಗಿ QPL ಶುರು..!
Post Views: 70