ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಶಿವಮೊಗ್ಗ ಭೇಟಿ ನೀಡಿ ಸಮಾವೇಶದಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಪ್ರಜ್ವಲ್ ಪೆನ್ಡ್ರೈವ್ ಕೇಸ್ ಬಗ್ಗೆ ಪ್ರಸ್ತಾಪಿಸಿ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಪ್ರಜ್ವಲ್ ಕೇಸ್ ಪ್ರಸ್ತಾಪಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ 400 ಮಹಿಳೆಯರ ರೇಪ್ ಮಾಡ್ತಾರೆ. ಇದು ಸೆಕ್ಸ್ ಸ್ಕ್ಯಾಂಡಲ್ ಅಲ್ಲ. ಮಾಸ್ ರೇಪ್. ಪ್ರಧಾನಿಯಾದವರು ರೇಪಿಸ್ಟ್ಗೆ ವೋಟ್ ಕೇಳುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಇನ್ನು ಬಿಜೆಪಿ ನಾಯಕರಿಗೆ ಪ್ರಜ್ವಲ್ ವಿಡಿಯೋಗಳ ಬಗ್ಗೆ ಗೊತ್ತಿತ್ತು. ಪ್ರಜ್ವಲ್ ಮಾಸ್ ರೇಪಿಸ್ಟ್ ಅಂತಾ ಗೊತ್ತಿದ್ದರೂ ಟಿಕೆಟ್ ಕೊಟ್ಟರು. ರೇಪಿಸ್ಟ್ಗೆ ಟಿಕೆಟ್ ಕೊಟ್ಟಿದ್ದಕ್ಕೆ ಪ್ರಧಾನಿ ದೇಶದ ಕ್ಷಮೆ ಕೇಳಬೇಕು. ಇವರ ಜೊತೆ ಅಮಿತ್ ಶಾ, ನಡ್ಡಾ ಸೇರಿ ಎಲ್ಲ ಬಿಜೆಪಿ ನಾಯಕರೂ ಕ್ಷಮೆ ಕೇಳಲಿ ನಮ್ಮ ಸರ್ಕಾರ ಈ ಅತ್ಯಾಚಾರಿಯನ್ನು ಸುಮ್ಮನೆ ಬಿಡೋದಿಲ್ಲ. ಅರೆಸ್ಟ್ ಮಾಡಿ, ತಕ್ಕ ಶಿಕ್ಷೆ ಕೊಟ್ಟೇ ಕೊಡಿಸುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗದಿದ್ರೆ ಅವರನ್ನು ಬಂಧಿಸಲೇಬೇಕಾಗುತ್ತೆ : ಡಾ.ಜಿ ಪರಮೇಶ್ವರ್..!