ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಸಂಬಂಧ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಫಾರಿನ್ನಿಂದ ಪ್ರಜ್ವಲ್ನನ್ನು ಕರೆಸಿಕೊಳ್ತೇವೆ. SITಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ, ರೇವಣ್ಣ ಇರಲಿ ಯಾರೇ ಇರಲಿ ಕ್ರಮ ಕೈಗೊಳ್ತೇವೆ ಎಂದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಪ್ರಜ್ವಲ್ ಪ್ರಕರಣವನ್ನು SP ಲೆವೆಲ್ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. SIT ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ತೇವೆ, ಪೆನ್ ಡ್ರೈವ್, ಸಾಕ್ಷಿ ಎಲ್ಲವನ್ನೂ ಪೊಲೀಸರು ಕಲೆ ಹಾಕ್ತಿದ್ದಾರೆ, ಎಲ್ಲಾ ವಿಡಿಯೊಗಳನ್ನೂ ಫೋರೆನ್ಸಿಕ್ ಲ್ಯಾಬ್ಗೆ ಕಳಿಸಲಾಗ್ತಿದೆ. ದೂರುದಾರರು ಯಾರ ಹೆಸರು ಉಲ್ಲೇಖ ಮಾಡ್ತಾರೋ ಅವರ ವಿರುದ್ಧ ಕ್ರಮ ಆಗುತ್ತೆ ಎಂದು ಹೇಳಿದ್ದಾರೆ.
ಮಹಿಳಾ ಆಯೋಗ ಸಿಎಂಗೆ ಡಿಜಿಪಿಗೆ ಪತ್ರ ಬರೆದಿದ್ರು. ಆ ಹಿನ್ನಲೆ ಕ್ರಮ ತೆಗೆದುಕೊಳ್ಳಲಾಗಿದೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದ್ರೆ ಅವರಿಗೆ ನಾವು ಭದ್ರತೆ ನೀಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ : ದಲಿತ ದಮನಿತರ ಪರವಾದ ದಿಟ್ಟ ದನಿಯಾಗಿದ್ದರು – ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ..!