Download Our App

Follow us

Home » ಮೆಟ್ರೋ » ತಪ್ಪು ಮಾಡಿದ್ರೆ ನಾವು ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ : ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣಕ್ಕೆ ಹೆಚ್​​ಡಿಕೆ ರಿಯಾಕ್ಷನ್..!

ತಪ್ಪು ಮಾಡಿದ್ರೆ ನಾವು ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ : ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣಕ್ಕೆ ಹೆಚ್​​ಡಿಕೆ ರಿಯಾಕ್ಷನ್..!

ಬೆಂಗಳೂರು : ಲೋಕಸಭೆ ಚುನಾವಣೆಯ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್​ ಮೀಡಿಯಾದಲ್ಲಿ ಕೆಲ ದೃಶ್ಯಗಳು ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೀಗ ಈ ಬಗ್ಗೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಯಾರೇ ತಪ್ಪು ಮಾಡಿದ್ರೂ ಉಪ್ಪು ತಿಂದವರೂ ನೀರು ಕುಡಿಯಬೇಕು. ತಪ್ಪು ಮಾಡಿದ್ದಾರೆ ನಾವು ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಮ್ಮ ಫ್ಯಾಮಿಲಿ ಮಹಿಳೆಯರಿಗೆ ಅತ್ಯಂತ ಗೌರವ ಕೊಟ್ಟಿದೆ. ಸರ್ಕಾರ ಎಸ್.​ಐ.ಟಿ ತನಿಖೆಗೆ ಈಗಾಗಲೇ ಆದೇಶ ಮಾಡಿದೆ. ಸಂಪೂರ್ಣವಾಗಿ ತನಿಖೆ ನಡೆದು ಸತ್ಯಾಂಶ ಹೊರಬರಲಿದೆ. ಪ್ರಜ್ವಲ್​ ವಿದೇಶಕ್ಕೆ ಹೋಗಿದ್ರೆ ಎಸ್.​ಐ.ಟಿ ತಂದ ಕರೆತರಲಿ ಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ನಾವು ಗ್ಯಾರೆಂಟಿಗೆ ದುಡ್ಡು ಕೇಳಿಲ್ಲ, ಬರಗಾಲಕ್ಕೆ ದುಡ್ಡು ಕೇಳಿದ್ವಿ – ಕೇಂದ್ರದ ವಿರುದ್ಧ ಸಿಎಂ ಸಿದ್ದು ಕೆಂಡ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here