Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ – SIT ತನಿಖೆಗೆ ಸರ್ಕಾರ ಆದೇಶ..!

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ – SIT ತನಿಖೆಗೆ ಸರ್ಕಾರ ಆದೇಶ..!

ಬೆಂಗಳೂರು : ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿ, ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಸೋಷಿಯಲ್​ ಮೀಡಿಯಾದಲ್ಲಿ ಕೆಲ ದೃಶ್ಯಗಳು ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತನಿಖೆಗೆ  CID ADGP ಬಿ.ಕೆ.ಸಿಂಗ್​ ನೇತೃತ್ವದಲ್ಲಿ SIT ರಚನೆ ಮಾಡಲಾಗಿದೆ. ಈ ತಂಡದಲ್ಲಿ ಇಬ್ಬರು ಎಸ್​ಪಿಗಳು, ಐವರು DySPಗಳು ಸೇರಿ ಇತರೆ ಅಧಿಕಾರಿಗಳು ಇರಲಿದ್ದು, ಎಸ್​ಐಟಿ ಶೀಘ್ರವೇ ಪ್ರಕರಣ ದಾಖಲಿಸಿ ತನಿಖೆಗೆ ಮುಂದಾಗಲಿದೆ. ಯಾವುದೇ ಕ್ಷಣ ಪ್ರಜ್ವಲ್​ ರೇವಣ್ಣಗೆ ನೋಟಿಸ್ ನೀಡುವ ಸಾಧ್ಯತೆಯಿದೆ.

ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಹಿಳಾ ಆಯೋಗದ ಪತ್ರ ಆಧರಿಸಿ ತನಿಖೆಗೆ ಆದೇಶಿಸಿದೆ. ಹಿರಿಯ ಅಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ಮಾಡಿದ್ದೇವೆ. ಪ್ರಜ್ವಲ್​​ ವಿದೇಶಕ್ಕೆ ಹೋಗಿರುವ ಮಾಹಿತಿ ಇದೆ. ಯಾವುದೇ ಕ್ಷಣ SIT ನೋಟಿಸ್​ ನೀಡಿ ವಿಚಾರಣೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಯಲಹಂಕದಲ್ಲಿ ಸರಣಿ ಅಪಘಾತ..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here