Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ​​..!

ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ​​..!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೊಮ್ಮೆ ವಶಕ್ಕೆ ಪಡೆಯಲು ಎಸ್ಐಟಿ ಸಜ್ಜಾಗಿದೆ. ಇಂದು ಮಧ್ಯಾಹ್ನದ ನಂತರ ಪ್ರಜ್ವಲ್ ರೇವಣ್ಣನನ್ನು ಎಸ್​ಐಟಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದೆ.

ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಜೂನ್‌ 10ರವರೆಗೆ ಎಸ್ಐಟಿ ತಂಡ ವಶಕ್ಕೆ ಪಡೆದುಕೊಂಡಿತ್ತು. ಈಗಾಗಲೇ ಹೊಳೆನರಸೀಪುರದ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್‌ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಮತ್ತೊಂದೆಡೆ, ಅಶ್ಲೀಲ ವಿಡಿಯೋಗಳು ಚಿತ್ರೀಕರಣಗೊಂಡಿವೆ ಎನ್ನಲಾದ ಮೂಲ ಮೊಬೈಲ್‌ ಫೋನ್‌ಗಾಗಿಯೂ ತಲಾಶ್ ಮುಂದುವರೆದಿದೆ. ಇದಲ್ಲದೆ, ಪ್ರಕರಣ ದಾಖಲಾದ ಬಳಿಕ ಒಂದು ತಿಂಗಳ ಕಾಲ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಅವರ ಆಪ್ತ ವಲಯದ ಕೆಲವರಿಗೆ ನೋಟಿಸ್‌ ನೀಡಲು ಎಸ್ಐಟಿ ಮುಂದಾಗಿದೆ.

ಇದನ್ನೂ ಓದಿ : ಮಂಗಳೂರು : ಬಿಜೆಪಿ ವಿಜಯೋತ್ಸವದ ಬಳಿಕ ಕಿಡಿಗೇಡಿಗಳಿಂದ ಅಟ್ಟಹಾಸ – ಇಬ್ಬರಿಗೆ ಚಾಕು ಇರಿತ..!

 

 

 

 

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here