ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋ ವೈರಲ್ ಕೇಸ್ ಬಗ್ಗೆ ಎಸ್ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ಈ ಕೇಸ್ನಲ್ಲಿ ಗುರುತು ಪತ್ತೆಯಾದ ಐದು ಸಂತ್ರಸ್ತೆಯರನ್ನು ಎಸ್ಐಟಿ ತಂಡವು ಸಿಐಡಿ ಕಚೇರಿಗೆ ಕರೆಸಿದ್ದಾರೆ. ಎಸ್ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ಹಾಜರಾಗಿದ್ದಾರೆ.
ವಿಡಿಯೋ ಕಾಲ್ನಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಗುರುತು ಪತ್ತೆಯಾದ ಸಂತ್ರಸ್ತೆಯರನ್ನ ವಿಚಾರಣೆ ಕರೆಸಲಾಗಿದೆ. ಈಗ ಎಸ್ಪಿ ಸೀಮಾ ಲಾಟ್ಕರ್ ಮುಂದೆ ಸಂತ್ರಸ್ತೆಯರು ಮಾಹಿತಿ ಬಿಚ್ಚಿಡುತ್ತಿದ್ದಾರೆ. ಸಂತ್ರಸ್ತೆಯರಿಂದ ಎಸ್ಪಿ ಹಲವು ಪ್ರಶ್ನೆಗಳಿಗೆ ಉತ್ತರ ಪಡೆದುಕೊಂಡಿದ್ದಾರೆ.
ಈ ವಿಡಿಯೋವನ್ನು ಯಾವ ಉದ್ದೇಶಕ್ಕೆ ಮಾಡಿಕೊಳ್ಳಲಾಗಿತ್ತು? ವಿಡಿಯೊದಲ್ಲಿರೋದು ನೀವೇನಾ? ಮಹಿಳೆಯರ ಇಚ್ಚೆಗನುಸಾರವಾಗಿ ವಿಡಿಯೋ ಮಾಡಿಕೊಳ್ಳಲಾಗಿತ್ತಾ? ಆಮಿಷ ಅಥವಾ ಭಯ ಉಂಟು ಮಾಡಿ ವಿಡಿಯೋ ಮಾಡಿಕೊಳ್ಳಲಾಗಿತ್ತಾ? ಹೀಗೆ ಹತ್ತಾರು ಪ್ರಶ್ನೆಗಳಿಗೆ ಸಂತ್ರಸ್ತೆಯರಿಗೆ ಎಸ್ಐಟಿ ತಂಡ ಪ್ರಶ್ನೆ ಮಾಡಿದೆ. ವಿಚಾರಣೆಯಲ್ಲಿ SIT ಮಹತ್ವದ ಮಾಹಿತಿಯನ್ನು ಕಲೆ ಹಾಕಿದೆ. ಎಸ್ಪಿ ಸೀಮಾ ಲಾಟ್ಕರ್ ಮುಂದೆ ಐವರು ಸಂತ್ರಸ್ತೆಯರು ಹಾಜರಾಗಿ, ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್ ಕಂಟ್ರೋಲ್ಗೆ ದಳಪತಿಗಳು ಪ್ರಜ್ವಲ್ ಉಚ್ಛಾಟನೆಗೆ ಮುಂದಾಗಿದ್ದಾರೆ. ಇತ್ತ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೂ ಇರಿಸುಮುರಿಸು ತರಿಸಿದೆ. ಪ್ರಜ್ವಲ್ ವಿಚಾರವನ್ನೇ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮುಗಿಬೀಳುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎನ್ನುವ ಬಿಜೆಪಿಯವರು, ಮೊದಲು ಹಾಸನ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿಗೆ ತಿರುಗೇಟು ನೀಡುತ್ತಿದ್ದಾರೆ.
ಇದನ್ನೂ ಓದಿ : ಬೌದ್ಧ ಧರ್ಮದ ಸಂಪ್ರದಾಯದಂತೆ ಇಂದು ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ..!