ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ (ಮೈಮುಲ್) ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಪ್ರಸನ್ನ ಕುಮಾರ್ ರಾಜೀನಾಮೆ ನೀಡಿದ್ದಾರೆ. ಪಿ.ಎಂ ಪ್ರಸನ್ನ ಕುಮಾರ್ ಅವರು ಎಚ್.ಡಿ ಕೋಟೆ ಮಾಜಿ ಶಾಸಕ ಕೆ.ಮಹದೇವ ಅವರ ಪುತ್ರರಾಗಿದ್ದು, 2021ರಲ್ಲಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ. (ಮೈಮುಲ್) ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಆದರೆ ಇದೀಗ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ ಕಿರುಕುಳಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಸಚಿವ ವೆಂಕಟೇಶ್ ಅವರು ಪಿ.ಎಂ ಪ್ರಸನ್ನರನ್ನು ಮೈಮುಲ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಮೇಲಿಂದ ಮೇಲೆ ನೊಟೀಸ್ ಕೊಡಿಸಿದ್ದರು. ಕಳೆದ 6 ತಿಂಗಳಲ್ಲಿ 24 ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಬಹಿರಂಗವಾಗಿ ಪ್ರಸನ್ನ ಅವರೇ ಆರೋಪಿಸಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರಸನ್ನ ಅವರು ದಿಢೀರ್ ಅಂತ ತಮ್ಮ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸನ್ನ ಅವರು ಮೈಮುಲ್ ಎಂಡಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಬೆಂಗಳೂರು ಶೆಡ್ನಲ್ಲಿ ಮತ್ತೊಂದು ಮರ್ಡರ್ - ದರ್ಶನ್ ಕೇಸ್ ಎಫೆಕ್ಟ್ನಿಂದ ಕೊಲೆ ಅಡ್ಡೆಯಾಗ್ತಿವೆ ಶೆಡ್..!