ಕನ್ನಡದ ಸ್ಟಾರ್ ನಿರ್ದೇಶಕ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಪ್ರಶಾಂತ್ ನೀಲ್ ಅವರು ಟಾಲಿವುಡ್ನ ಬಹುಬೇಡಿಕೆಯ ನಟ ವಿಜಯ್ ದೇವರಕೊಂಡ ಅವರ ಮನೆಗೆ ತೆರಳಿ ಭೇಟಿಯಾಗಿದ್ದಾರೆ.
ಹೌದು, ಈ ಭೇಟಿಯ ಬಳಿಕ ಅಭಿಮಾನಿಗಳ ಮನದಲ್ಲಿ ಅನೇಕ ಪ್ರಶ್ನೆಗಳು ಮೂಡಿವೆ. ಇಬ್ಬರೂ ಜೊತೆಯಾಗಿ ಸಿನಿಮಾ ಮಾಡುವ ಸಾಧ್ಯತೆಗಳ ಬಗ್ಗೆ ಮಾತುಕತೆ ನಡೆದಿರಬಹುದಾ ಎಂದು ನೆಟ್ಟಿಗರು ಕೇಳುತ್ತಿದ್ದಾರೆ.
ಒಟ್ನಲ್ಲಿ ಈ ಭೇಟಿ ಅಭಿಮಾನಿಗಳ ವಲಯದಲ್ಲಿ ಭಾರಿ ಕೌತುಕ ಮೂಡಿಸಿದೆ. ಚಿತ್ರರಂಗದಲ್ಲಿ ಸ್ಟಾರ್ ಡೈರೆಕ್ಟರ್, ನಟರು ಯಾವುದೇ ಕಾರಣ ಇಲ್ಲದೇ ಒಬ್ಬರನ್ನೊಬ್ಬರು ಭೇಟಿಯಾಗುವುದು ಬಹಳ ಕಡಿಮೆ. ಹೀಗಾಗಿ, ಈಗ ಪ್ರಶಾಂತ್ ನೀಲ್ ಹಾಗೂ ದೇವರಕೊಂಡ ನಡುವಿನ ಭೇಟಿಯ ಹಿಂದೆ ಇರುವ ಉದ್ದೇಶ ಏನು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಕಾಡುತ್ತಿದೆ.
ಕೆಲವು ಮೂಲಗಳ ಪ್ರಕಾರ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ಸಲಾರ್ 2 ಸಿನಿಮಾ ಅಥವಾ ಜೂನಿಯರ್ ಎನ್ಟಿಆರ್ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರಿಗೂ ಒಂದು ಪ್ರಮುಖ ಪಾತ್ರ ನೀಡಲು ಪ್ರಶಾಂತ್ ಪ್ಲಾನ್ ಮಾಡಿರಬಹುದು ಎನ್ನಲಾಗ್ತಿದೆ. ಇದೇ ಕಾರಣಕ್ಕಾಗಿಯೇ ಪ್ರಶಾಂತ್ ನೀಲ್ ಮತ್ತು ವಿಜಯ್ ದೇವರಕೊಂಡ ಭೇಟಿ ಆಗಿರಬಹುದಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದೆ. ಇಬ್ಬರ ಭೇಟಿ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ. ಭೇಟಿ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಅವರೇ ಬಹಿರಂಗಪಡಿಸಬೇಕಿದೆ.
ಪ್ರಶಾಂತ್ ನೀಲ್ ಅವರು ‘ಉಗ್ರಂ’ ಸಿನಿಮಾದಿಂದ ಕನ್ನಡ ಚಿತ್ರರಂಗದಲ್ಲಿ ಹೆಸರುಗಳಿಸಿ, ಬಳಿಕ ‘ಕೆಜಿಎಫ್ ಚಾಪ್ಟರ್ 1’ ಸಿನಿಮಾದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಗಳಿಸಿದರು. ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದಿಂದ ಅವರಿಗೆ ಭರ್ಜರಿ ಯಶಸ್ಸು ಕೂಡ ಸಿಕ್ಕಿತು. ಸದ್ಯ ಟಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಪ್ರಶಾಂತ್ ನೀಲ್ ಜೊತೆ ಕೆಲಸ ಮಾಡಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದೀಗ ದೇವರಕೊಂಡ ಭೇಟಿಯ ಹಿಂದಿರುವ ಉದ್ದೇಶ ಏನು ಎಂಬ ಕುರಿತಂತೆ ಅಧಿಕೃತವಾಗಿ ಯಾರೂ ಸ್ಪಷ್ಟನೆ ನೀಡಿಲ್ಲ.
ಇದನ್ನೂ ಓದಿ : ‘ಗೌರಿ’ ಚಿತ್ರದ ಪ್ರೀ ಟೀಸರ್ ರಿಲೀಸ್ ಮಾಡಿದ ಅನಿಲ್ ಕುಂಬ್ಳೆ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್..!