Download Our App

Follow us

Home » ಸಿನಿಮಾ » ಕೊನೆಗೂ ಡಿವೋರ್ಸ್‌ ಹಿಂದಿನ ಕಾರಣ ಬಿಚ್ಚಿಟ್ಟ ನಟಿ ಪ್ರೇಮಾ..!

ಕೊನೆಗೂ ಡಿವೋರ್ಸ್‌ ಹಿಂದಿನ ಕಾರಣ ಬಿಚ್ಚಿಟ್ಟ ನಟಿ ಪ್ರೇಮಾ..!

ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಸ್ಟಾರ್ ಹೀರೋಯಿನ್‌ಗಳಲ್ಲಿ ನಟಿ ಪ್ರೇಮಾ ಅವರು ಕೂಡ ಒಬ್ಬರು. ಕನ್ನಡ ಹಾಗೂ ತೆಲುಗು ಭಾಷೆಯ ಹಲವು ಚಿತ್ರದಲ್ಲಿ ನಟಿಸಿರುವ ಪ್ರೇಮಾ, ಬಣ್ಣದ ಲೋಕದಿಂದ ಕೊಂಚ ಹಿಂದೆ ಸರಿದಿದ್ದರು. ಸದ್ಯ ಕಿರುತೆರೆಯಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್‌ವುಡ್‌ ಸುಂದರಿ ಪ್ರೇಮಾ ಜೀ ಕನ್ನಡ ಪ್ರಸಾರವಾಗುತ್ತಿರುವ ಮಹಾನಟಿ ಕಾರ್ಯಕ್ರಮದಲ್ಲಿ ತೀರ್ಪುಗಾರರ ಸ್ಥಾನ ಸ್ವೀಕರಿಸಿದ್ದಾರೆ. ಈ ನಡುವೆ ಪ್ರೇಮಾ ಪರ್ಸನಲ್ ಲೈಫ್ ಚರ್ಚೆಯಲ್ಲಿದೆ.

ಇತ್ತೀಚೆಗೆ ನಟ ಪ್ರೇಮಾ ಯೂಟ್ಯೂಬ್ ಚಾನಲ್ ಪಾಡ್‌ಕಾಸ್ಟ್‌ನಲ್ಲಿ ಭಾಗಿ ಆಗಿದ್ದರು. ಈ ವೇಳೆ ತಮ್ಮ ವೈಯಕ್ತಿಕ  ಜೀವನದ  ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿರುವ ಅವರು, ಆ ಸಮಯದಲ್ಲಿ ನನೆಗ ಸರಿಯಾಗಿ ಅವಕಾಶಗಳು ಸಿಗುತ್ತಿರಲಿಲ್ಲ. ಮನೆಯಲ್ಲಿ ಮದುವೆ ಆಗುವಂತೆ ಒತ್ತಾಯಿಸಿದರು. ನನ್ನ ತಂಗಿ 7 ವರ್ಷಗಳಿಂದ ಪ್ರೀತಿಸುತ್ತಿದ್ದಳು. ಹಾಗಾಗಿ ನಿನ್ನ ಮದುವೆ ಆಗದಿದ್ದರೆ ತಂಗಿ ಮದುವೆ ಅಗಲ್ಲ ಎಂದು ಅಪ್ಪ ಅಮ್ಮ ಹೇಳುತ್ತಿದ್ದರು. ಹಾಗಾಗಿ ಬೇಡ ಎನ್ನಲು ಸಾಧ್ಯವಾಗದೇ ಮದುವೆಗೆ ಒಪ್ಪಿಕೊಂಡೆ. ನಮ್ಮದು ಅರೇಂಜ್ಡ್‌ ಮ್ಯಾರೇಜ್’ ಆಗಿತ್ತು ಎಂದಿದ್ದಾರೆ.  ಹೇಳಿಕೊಂಡಿದ್ದಾರೆ.

ಅದೇ ವ್ಯಕ್ತಿಯನ್ನು ಯಾಕೆ ಮದುವೆಯಾದೆ ಎನ್ನುವುದರ ಬಗ್ಗೆ ಮಾತನಾಡಿದ ಪ್ರೇಮಾ, ಅವರು ಮನೆಗೆ ಬರುತ್ತಿದ್ದರು. ನಾನೇ ಮದುವೆ ಮಾಡಿಕೊಳ್ಳುತ್ತೀನಿ ಎಂದು ಕೇಳಿದರು. ಆಮೇಲೆ ಎಲ್ಲರೂ ಒಪ್ಪಿದರು. ನಮ್ಮ ಮನೆಯಿಂದ ಅವರ ಮನೆ ಹತ್ತಿರವಿತ್ತು. ಹೋಗಿ ಬಂದು ಅಪ್ಪ ಅಮ್ಮನನ್ನು ನೋಡಿಕೊಳ್ಳಬಹುದು ಅಂತಾ ಆ ಉದ್ದೇಶದಿಂದ ನಾನು ಮದುವೆಯಾದೆ. ಜೀವನದ ಬಗ್ಗೆ ನನಗೂ ಸಾಕಷ್ಟು ನಿರೀಕ್ಷೆಗಳಿದ್ದವು. ನಾನು ಸಿನಿಮಾಗಳಲ್ಲಿ ಬ್ಯುಸಿ ಇದ್ದಿದ್ದರಿಂದ ನನ್ನ ಎಲ್ಲಾ ಕನಸುಗಳನ್ನು ಮುಂದೂಡುತ್ತಾ ಹೋಗುತ್ತಿದ್ದೆ. ಪಬ್‌ಗೆ ಹೋಗದೇ ಮತ್ತೆಲ್ಲೋ ಹೋಗಿ ಎಂಜಾಯ್ ಮಾಡೋದು ಎಲ್ಲಾ ಮದುವೆ ಬಳಿಕ ಎಂದುಕೊಳ್ಳುತ್ತಿದ್ದೆ. ನನ್ನ ಗಂಡ ಹೀಗಿರಬೇಕು ಹಾಗಿರಬೇಕು ಎನ್ನುವ ನಿರೀಕ್ಷೆ ಇರುತ್ತದೆ. ಆ ಎಕ್ಸ್‌ಪೆಕ್ಟೇಷನ್‌ಗೆ ಹರ್ಟ್ ಆಗೋದು’ ಎಂದು ಪ್ರೇಮಾ ಹೇಳಿದ್ದಾರೆ.

‘ಡಿವೋರ್ಸ್‌ ನಿರ್ಧಾರ ಅವತ್ತು ಬಹಳ ಕಷ್ಟವಾಗಿತ್ತು. ತಂದೆ ತಾಯಿ ಹೇಳುವುದು ಕಷ್ಟ ಅನಿಸಿತ್ತು ನಂತರ ಎಲ್ಲರೂ ಬೆಂಬಲವಾಗಿ ನಿಂತರು. ಬಳಿಕ ನಾನು ಹೆಜ್ಜೆ ಮುಂದಿಟ್ಟೆ. ಮದುವೆ ಆಗದೆಯೇ ಒಂಟಿಯಾಗಿಯೂ ಜೀವಿಸ ಬಹುದು. ಯಾಕೆಂದರೆ ಕೊನೆಗೆ ಹೋಗುವುದು ಒಬ್ಬರೇ ಅಲ್ಲವೆ? ಇನ್ನೊಬ್ಬರ ಮೇಲೆ ಯಾಕೆ ಅವಲಂಬಿತವಾಗಬೇಕು? ಇನ್ನೊಬ್ಬರ ಮೇಲೆ ಯಾಕೆ ನಿರೀಕ್ಷೆ ಇಟ್ಟುಕೊಳ್ಳಬೇಕು’ ಎಂದು ನಟಿ ಪ್ರೇಮಾ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.

ಇದನ್ನೂ ಓದಿ : TDP ಬೆಂಬಲ NDAಗೆ – ಮೋದಿಗೆ ಜೈ ಎಂದ ಚಂದ್ರಬಾಬು ನಾಯ್ಡು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here