ನವದೆಹಲಿ : ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಾತನಾಡಲಿದ್ದಾರೆ. ನಿನ್ನೆ ಮೋದಿ ಹಾಗೂ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಗುಡುಗಿದ್ದರು.
ಇಂದು ರಾಹುಲ್ ಗಾಂಧಿ ಹೇಳಿಕೆಗಳಿಗೆ ಖಡಕ್ ಉತ್ತರ ಕೊಡಲು ಪ್ರಧಾನಿ ಸಜ್ಜಾಗಿದ್ದಾರೆ. ಮೋದಿ ತಮ್ಮ ಭಾಷಣದಲ್ಲಿ ಅಗ್ನಿವೀರ್, ಪರೀಕ್ಷಾ ಅಕ್ರಮ, ಹೊಸ ಅಪರಾಧ ಕಾನೂನು ಜಾರಿ ಸೇರಿ ಇತ್ತಿಚಿನ ಬೆಳವಣಿಗೆಯಲ್ಲಿ ಸರ್ಕಾರದ ನಡೆಯನ್ನು ಸಮರ್ಥಿಸುವ ಜೊತೆ ಜೊತೆಗೆ ವಿರೋಧ ಪಕ್ಷಗಳ ನಾಯಕರ ಟೀಕೆಗೆ ಉತ್ತರ ನೀಡಲಿದ್ದಾರೆ.
ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ನಿನ್ನೆ ಮೋದಿ, ಬಿಜೆಪಿ, ಆರ್ಎಸ್ಎಸ್ ಗುರಿಯಾಗಿಸಿ ಭಾಷಣ ಮಾಡಿದ್ದರು. ಅಷ್ಟೇ ಅಲ್ಲದೇ ಹಿಂದೂ ಹೇಳಿಕೊಳ್ಳುವವರಿಂದ ಹಿಂಸಾಚಾರ ಎಂದು ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ನಿನ್ನೆ ರಾಹುಲ್ ಭಾಷಣದ ಮಧ್ಯೆ ಪ್ರಧಾನಿ ಎದ್ದು ನಿಂತು ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಎಲ್ಲಾ ವಿಚಾರಗಳನ್ನು ಪ್ರಸ್ತಾಪ ಮಾಡಿ ಇಂದು ಮೋದಿ ತಿರುಗೇಟು ನೀಡುವ ಸಾಧ್ಯತೆಯಿದೆ.
ಇದನ್ನೂ ಓದಿ : ರೀಲ್ಸ್ಗಾಗಿ ಎಕೆ 47 ಹಿಡಿದು, ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿ ಸುಂದರಿಯರ ನಡುವೆ ಶೋಕಿ ಮಾಡ್ತಿದ್ದ ಅರುಣ್ ಕಟಾರೆ ಜೈಲುಪಾಲು..!