ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ A2 ಆರೋಪಿ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಲೆ ಕೇಸ್ನಲ್ಲಿ ಜೈಲು ಪಾಲಾದ ನಟ ದರ್ಶನ್ಗೆ ವಿಚಾರಣಾಧೀನ ಖೈದಿ ನಂಬರ್ 6106 ನೀಡಲಾಗಿದೆ.
ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಕೊಲೆ ಕೇಸ್ನಲ್ಲಿ ಆರೋಪಿಗಳಾಗಿದ್ದ ನಾಲ್ವರನ್ನು ಪೊಲೀಸರು ಕರೆತಂದಿದ್ದರು. ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಸಾಮಾನ್ಯ ಖೈದಿಗಳಂತೆ ನಟ ದರ್ಶನ್ ಜೈಲು ಸೇರಿದ್ದಾರೆ.
ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ ಅಭಿಮಾನಿ ಬಳಗದಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನಾಲ್ಕು ಆರೋಪಿಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ. ನಟ ದರ್ಶನ್ ಸೇರಿ ಮೂವರು ಆರೋಪಿಗಳಿಗೂ ವಿಚಾರಣಧೀನಾ ಖೈದಿ ನಂಬರ್ ನೀಡಿದೆ.
ವಿಚಾರಣಾಧೀನ ಖೈದಿ ನಂಬರ್ :
ದರ್ಶನ್ – 6106
ಪ್ರದೋಶ್ – 6109
ವಿನಯ್ – 6108
ಧನರಾಜ್ – 6107
ಇದನ್ನೂ ಓದಿ : ದರ್ಶನ್ ಫ್ಯಾನ್ಸ್ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ – ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖ..!