Download Our App

Follow us

Home » ಅಪರಾಧ » ಪರಪ್ಪನ ಅಗ್ರಹಾರ ಸೇರಿದ ಡಿ ಗ್ಯಾಂಗ್‌ – ದರ್ಶನ್​ಗೆ ವಿಚಾರಣಾಧೀನ ಖೈದಿ ನಂಬರ್ 6106..!

ಪರಪ್ಪನ ಅಗ್ರಹಾರ ಸೇರಿದ ಡಿ ಗ್ಯಾಂಗ್‌ – ದರ್ಶನ್​ಗೆ ವಿಚಾರಣಾಧೀನ ಖೈದಿ ನಂಬರ್ 6106..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ A2 ಆರೋಪಿ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಲೆ ಕೇಸ್​ನಲ್ಲಿ ಜೈಲು ಪಾಲಾದ ನಟ ದರ್ಶನ್​ಗೆ ವಿಚಾರಣಾಧೀನ ಖೈದಿ ನಂಬರ್ 6106 ನೀಡಲಾಗಿದೆ.

ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಕೊಲೆ ಕೇಸ್​​ನಲ್ಲಿ ಆರೋಪಿಗಳಾಗಿದ್ದ ನಾಲ್ವರನ್ನು ಪೊಲೀಸರು ಕರೆತಂದಿದ್ದರು. ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಯ್ತು. ಸಾಮಾನ್ಯ ಖೈದಿಗಳಂತೆ ನಟ ದರ್ಶನ್ ಜೈಲು ಸೇರಿದ್ದಾರೆ.

ಇದೇ ಪ್ರಕರಣದ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ ಎರಡು ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್‌ ಅಭಿಮಾನಿ ಬಳಗದಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನಾಲ್ಕು ಆರೋಪಿಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್ ಮೂಲಕ ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ. ನಟ ದರ್ಶನ್ ಸೇರಿ ಮೂವರು ಆರೋಪಿಗಳಿಗೂ ವಿಚಾರಣಧೀನಾ ಖೈದಿ ನಂಬರ್ ನೀಡಿದೆ.

ವಿಚಾರಣಾಧೀನ ಖೈದಿ ನಂಬರ್‌ :

ದರ್ಶನ್ – 6106

ಪ್ರದೋಶ್ – 6109

ವಿನಯ್ – 6108

ಧನರಾಜ್ – 6107

ಇದನ್ನೂ ಓದಿ : ದರ್ಶನ್​​ ಫ್ಯಾನ್ಸ್ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ – ರಿಮ್ಯಾಂಡ್​ ಅರ್ಜಿಯಲ್ಲಿ ಉಲ್ಲೇಖ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here