Download Our App

Follow us

Home » ಜಿಲ್ಲೆ » ಚಾಮರಾಜನಗರ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಪ್ರತಿಭಟನೆ ಶಾಕ್ ​​- ಚುನಾವಣೆ ಬಹಿಷ್ಕಾರ ಹಾಕೋದಾಗಿ ರೈತರಿಂದ ಎಚ್ಚರಿಕೆ..!

ಚಾಮರಾಜನಗರ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಪ್ರತಿಭಟನೆ ಶಾಕ್ ​​- ಚುನಾವಣೆ ಬಹಿಷ್ಕಾರ ಹಾಕೋದಾಗಿ ರೈತರಿಂದ ಎಚ್ಚರಿಕೆ..!

ಮೈಸೂರು : ಲೋಕಸಭೆ ಚುನಾವಣೆಗೆ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಸಿಎಂ ಪುತ್ರ ಯತೀಂದ್ರಗೆ ಪ್ರತಿಭಟನೆ ಶಾಕ್​​ ಎದುರಾಗಿದೆ.  ಚುನಾವಣೆಯಿಂದ ಬಹಿಷ್ಕಾರ ಹಾಕೋದಾಗಿ ಯತೀಂದ್ರಗೆ ಜನರು ಎಚ್ಚರಿಸಿದ್ದಾರೆ. ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಯತೀಂದ್ರ ಮೇಲೆ ಗ್ರಾಮಸ್ಥರ ಸಿಟ್ಟಾಗಿದ್ದಾರೆ.

ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿಎಂ ಪುತ್ರ ಯತೀಂದ್ರ ಅವರು ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಹಲವು ದಿನಗಳಿಂದ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರೊಟೆಸ್ಟ್​ ನಡೆಸುತ್ತಿದ್ದಾರೆ. ರೈತರು ಕಾರ್ಖಾನೆ ಬಳಿ ಕಳೆದ ಎರಡು ತಿಂಗಳಿಂದ ಅಹೋರಾತ್ರಿ ಧರಣಿ ಮಾಡ್ತಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಮತಯಾಚನೆ ಮಾಡಿದ್ದಾರೆ.

ಹಾಗಾಗಿ ಎಲೆಕ್ಷನ್​​ ಬಂತು ಅಂತಾ ಈಗ ಬಂದಿದ್ದೀರಾ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಡಾ.ಯತೀಂದ್ರ ಅವರು ಸಿಎಂ ಗಮನಕ್ಕೆ ತಂದು ಸಮಸ್ಯೆ ಪರಿಹರಿಸೋದಾಗಿ ಭರವಸೆ ನೀಡಿದ್ದರು. ಇನ್ನೂ ಸಿಎಂ ಗಮನಕ್ಕೆ ಈ ವಿಚಾರ ತಂದಿಲ್ಲವೇ ಎಂದು ಯತೀಂದ್ರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಬೇಡಿಕೆ ಈಡೇರಿಸದೇ ಇದ್ರೆ ಎಲೆಕ್ಷನ್​ ಬಹಿಷ್ಕರಿಸೋದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಅಕ್ಟೋಬರ್​​ನಲ್ಲಿ ಬಿಡುಗಡೆಯಾಗಲಿದೆ ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here