ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಹಗರಣ ಪ್ರಕರಣದ ಬೆನ್ನಲ್ಲೇ, ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಮೂಡಾ ನೂತನ ಆಯುಕ್ತರಾಗಿ ಎ.ಎನ್ ರಘುನಂದನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯಲ್ಲೇ ಸೇವೆ ಸಲ್ಲಿಸುತ್ತಿದ್ದ ಎ.ಎನ್.ರಘುನಂದನ್ ನಿನ್ನೆ ಸಂಜೆಯೇ ಮೂಡಾ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕಾರಿಸಿದ್ದಾರೆ.
ಮೂಡಾ ಕಾರ್ಯದರ್ಶಿಯಾಗಿದ್ದ ಜಿ.ಡಿ ಶೇಖರ್ ಅವರನ್ನು ಕೂಡಾ ಎತ್ತಂಗಡಿ ಮಾಡಲಾಗಿದ್ದು, ಮೂಡಾ ನೂತನ ಕಾರ್ಯದರ್ಶಿಯಾಗಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮದ ಪ್ರಧಾನ ವ್ಯವಸ್ಥಾಪಕ ವಿ.ಕೆ. ಪ್ರಸನ್ನಕುಮಾರ್ ಅವರನ್ನು ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Post Views: 91