ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ, ದಾವಣಗೆರೆ, ಉತ್ತರಕನ್ನಡ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ.
ಹಾಗೆಯೇ ರಾಹುಲ್ ಗಾಂಧಿ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಪ್ರಚಾರ ಸಭೆ ನಡೆಯಲಿದ್ದು, ನಂತರ ಮಧ್ಯಾಹ್ನ 2.30ಕ್ಕೆ ರಾಯಚೂರಿಗೆ ತೆರಳಲಿದ್ದಾರೆ.
ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಹವಾ ಶುರುವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಉತ್ತರಕನ್ನಡ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಬಹಿರಂಗ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಮಾರ್ ನಾಯಕ್ ಪರ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ.
ಇದನ್ನೂ ಓದಿ : ಭಾರತದ ಹೆಸರಾಂತ ರಿಲಯನ್ಸ್ ಎಂಟರ್ಟೈನ್ಮೆಂಟ್ ಮೂಲಕ “ದ ಜಡ್ಜ್ ಮೆಂಟ್” ಚಿತ್ರ ರಿಲೀಸ್..!
Post Views: 68