Download Our App

Follow us

Home » ರಾಜಕೀಯ » ಪ್ರಜ್ವಲ್​ ರೇವಣ್ಣ ಪ್ರಕರಣದಲ್ಲಿ ಕಠಿಣ ಶಿಕ್ಷೆ ಆಗ್ಬೇಕು – ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​ ಗಾಂಧಿ..!

ಪ್ರಜ್ವಲ್​ ರೇವಣ್ಣ ಪ್ರಕರಣದಲ್ಲಿ ಕಠಿಣ ಶಿಕ್ಷೆ ಆಗ್ಬೇಕು – ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್​ ಗಾಂಧಿ..!

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್​​ ಪೆನ್​​ಡ್ರೈವ್​​ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್​ ರೇವಣ್ಣ ಪ್ರಕರಣದಲ್ಲಿ ಕಠಿಣ ಶಿಕ್ಷೆ ಆಗ್ಬೇಕು. ಸಂತ್ರಸ್ತೆಯರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು ಎಂದು ಕಾಂಗ್ರೆಸ್​​​​ ನಾಯಕ ರಾಹುಲ್​​ ಗಾಂಧಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​​ ಗಾಂಧಿ ಬರೆದ ಪತ್ರದಲ್ಲಿ, ಅಣ್ಣ-ತಮ್ಮ, ಮಗನಂತೆ ನೋಡಿಕೊಳ್ಳುತ್ತಿದ್ದವರ ಮೇಲೆ ದೌರ್ಜನ್ಯ ನಡೆದಿದೆ. ಈ ಹಿಂದೆಯೇ ದೇವರಾಜೇಗೌಡರು ಅಮಿತ್​ಶಾಗೆ ಮಾಹಿತಿ ನೀಡಿದ್ದರು. ಪ್ರಧಾನಿ ಗಮನಕ್ಕೆ ತಂದರೂ ಟಿಕೆಟ್ ಕೊಟ್ಟಿರುವ ಬಗ್ಗೆ ನನಗೆ ಶಾಕ್ ಆಗಿದೆ.

ಇನ್ನು ಪ್ರಜ್ವಲ್​​ ದೇಶದಿಂದ ಪರಾರಿಯಾಗಲು ಕೇಂದ್ರ ಸರ್ಕಾರವೇ ಸಹಕಾರ ಕೊಟ್ಟಿದೆ. ಹರಿಯಾಣ ಕುಸ್ತಿಪಟುಗಳು, ಮಣಿಪುರ ಹಿಂಸಾಚಾರದಲ್ಲಿ ಮೋದಿ ಮೌನವಾಗಿದ್ದರು. ಆದರೆ ತಾಯಂದಿರ, ಸಹೋದರಿಯರ ಪರ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್​ನದ್ದು. ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದು ಮಾಡಿ ಭಾರತಕ್ಕೆ ಕರೆಸಲು ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ಪತ್ರ ಬರೆದಿದ್ದಾರೆ.

ಇದನ್ನೂ ಓದಿ : ಸದಾ ಗಿಜುಗುಡುತ್ತಿದ್ದ ಹಾಸನ ಎಂಪಿ ನಿವಾಸ ಈಗ ಖಾಲಿ ಖಾಲಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here