ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಠಿಣ ಶಿಕ್ಷೆ ಆಗ್ಬೇಕು. ಸಂತ್ರಸ್ತೆಯರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬರೆದ ಪತ್ರದಲ್ಲಿ, ಅಣ್ಣ-ತಮ್ಮ, ಮಗನಂತೆ ನೋಡಿಕೊಳ್ಳುತ್ತಿದ್ದವರ ಮೇಲೆ ದೌರ್ಜನ್ಯ ನಡೆದಿದೆ. ಈ ಹಿಂದೆಯೇ ದೇವರಾಜೇಗೌಡರು ಅಮಿತ್ಶಾಗೆ ಮಾಹಿತಿ ನೀಡಿದ್ದರು. ಪ್ರಧಾನಿ ಗಮನಕ್ಕೆ ತಂದರೂ ಟಿಕೆಟ್ ಕೊಟ್ಟಿರುವ ಬಗ್ಗೆ ನನಗೆ ಶಾಕ್ ಆಗಿದೆ.
ಇನ್ನು ಪ್ರಜ್ವಲ್ ದೇಶದಿಂದ ಪರಾರಿಯಾಗಲು ಕೇಂದ್ರ ಸರ್ಕಾರವೇ ಸಹಕಾರ ಕೊಟ್ಟಿದೆ. ಹರಿಯಾಣ ಕುಸ್ತಿಪಟುಗಳು, ಮಣಿಪುರ ಹಿಂಸಾಚಾರದಲ್ಲಿ ಮೋದಿ ಮೌನವಾಗಿದ್ದರು. ಆದರೆ ತಾಯಂದಿರ, ಸಹೋದರಿಯರ ಪರ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ನದ್ದು. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆಸಲು ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ಸದಾ ಗಿಜುಗುಡುತ್ತಿದ್ದ ಹಾಸನ ಎಂಪಿ ನಿವಾಸ ಈಗ ಖಾಲಿ ಖಾಲಿ..!