Download Our App

Follow us

Home » ರಾಜಕೀಯ » ನಾಳೆ ರಾಜ್ಯದಲ್ಲಿ ರಾಹುಲ್ ಗಾಂಧಿ ಆರ್ಭಟ – ಮಂಡ್ಯ, ಕೋಲಾರದಲ್ಲಿ ಬೃಹತ್ ಸಮಾವೇಶ..!

ನಾಳೆ ರಾಜ್ಯದಲ್ಲಿ ರಾಹುಲ್ ಗಾಂಧಿ ಆರ್ಭಟ – ಮಂಡ್ಯ, ಕೋಲಾರದಲ್ಲಿ ಬೃಹತ್ ಸಮಾವೇಶ..!

ಮಂಡ್ಯ : ನಾಳೆ ರಾಜ್ಯದಲ್ಲಿ ರಾಹುಲ್​​ ಗಾಂಧಿ ಆರ್ಭಟಿಸಲು ಸಜ್ಜಾಗಿದ್ದಾರೆ. ಮಂಡ್ಯ ಹಾಗೂ ಕೋಲಾರದಲ್ಲಿ ರಾಹುಲ್ ಗಾಂಧಿ ಬೃಹತ್ ಸಮಾವೇಶ ನಡೆಯಲಿದ್ದು, ಮೋದಿ ಬಂದು ಹೋದ ಬೆನ್ನಲ್ಲೇ ಕಾಂಗ್ರೆಸ್​ ಹವಾ ತೋರಿಸಲು ತಂತ್ರ ರೂಪಿಸಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಎರಡು ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಮಂಡ್ಯ-ಕೋಲಾರದಲ್ಲಿ ರಾಹುಲ್​ ಗಾಂಧಿ ಕಾಂಗ್ರೆಸ್​ನ ಶಕ್ತಿ ಪ್ರದರ್ಶಿಸಲಿದ್ದಾರೆ.

ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ಆಯೋಜನೆ ಮಾಡಲಾಗಿದೆ. ಸ್ಟಾರ್​​ ಚಂದ್ರು ಪರವಾಗಿ ರಾಹುಲ್ ಪ್ರಚಾರ ಮಾಡಲಿದ್ದಾರೆ. ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಅಬ್ಬರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಚೆಲುವರಾಯಸ್ವಾಮಿ, ರವಿಕುಮಾರ್​​​ ಗೌಡ ಸೇರಿದಂತೆ ಮಂಡ್ಯದ ಶಾಸಕರು ಸಾಥ್​ ನೀಡಲಿದ್ದಾರೆ. ಮಂಡ್ಯ ಗೆಲ್ಲಲು  ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಭರ್ಜರಿ ತಂತ್ರಗಾರಿಕೆ ರೆಡಿ ಮಾಡಿದ್ದು, ಬೃಹತ್ ಬಹಿರಂಗ ಸಮಾವೇಶ ಆಯೋಜಿಸಿ ಕಾಂಗ್ರೆಸ್​ ಶಕ್ತಿ ಪ್ರದರ್ಶನ ಮಾಡಲಿದೆ.

ಸಕ್ಕರೆ ನಾಡಿನ ಮತ ಬೇಟೆಯ ಬಳಿಕ ಚಿನ್ನದ ನಾಡಿಗೆ ರಾಹುಲ್ ಗಾಂಧಿ ಎಂಟ್ರಿ ಕೊಡಲಿದ್ದಾರೆ. ಕೋಲಾರದಲ್ಲಿ ಮುನಿಸು ಶಮನ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಪ್ಲಾನ್​​​ ಮಾಡಿಕೊಳ್ಳಲಾಗಿದೆ. ಮುನಿಯಪ್ಪ-ರಮೇಶ್​ ಕುಮಾರ್​ ಬಣದ ಮುನಿಸು ಶಮನಕ್ಕೆ ವೇದಿಕೆ ಸಿದ್ದವಾಗಿದ್ದು, ಭಿನ್ನಮತ ಶಮನ ಮಾಡಿ ಒಂದೇ ವೇದಿಕೆಯಲ್ಲಿ ಎಲ್ಲರನ್ನು ಸೇರಿಸಲು ತಂತ್ರ ರೂಪಿಸಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರು ತಾಲೂಕಿನ ಚೋಕಂಡಹಳ್ಳಿಯಲ್ಲಿ ಬೃಹತ್​ ಸಮಾವೇಶ ನಡೆಯಲಿದ್ದು, ರಾಹುಲ್​ ಗಾಂಧಿಯವರು ಕೆ.ವಿ.ಗೌತಮ್​ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಕೋಲಾರ ಲೋಕಸಭೆ ಕ್ಷೇತ್ರ ಕಾಂಗ್ರೆಸ್​ ತೆಕ್ಕೆಗೆ ತಗೆದುಕೊಳ್ಳಲು ತಂತ್ರಗಾರಿಕೆ ನಡೆಸುತ್ತಿದ್ದು, ಕಾಂಗ್ರೆಸ್ ನಾಯಕರು ಒಂದೊಂದು ಕ್ಷೇತ್ರವನ್ನೂ ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ : ಸಲ್ಮಾನ್ ಖಾನ್ ನಿವಾಸದ ಮೇಲೆ ಫೈ*ರಿಂಗ್ ನಡೆಸಿದ್ದ ಇಬ್ಬರು ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here