ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಆರ್ಎಸ್ ಅಣೆಕಟ್ಟೆಗೆ 8,425 ಕ್ಯೂಸೆಕ್ ಭರ್ಜರಿ ಒಳಹರಿವು ಬಂದಿದೆ. ಪರಿಣಾಮ ಒಂದೇ ವಾರದಲ್ಲಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ100 ಅಡಿಗಳನ್ನು ದಾಟಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ :
- ಗರಿಷ್ಠ ಮಟ್ಟ – 124.80 ಅಡಿ.
- ಇಂದಿನ ಮಟ್ಟ – 102.80 ಅಡಿ.
- ಗರಿಷ್ಠ ಸಾಂದ್ರತೆ – 49.452 ಟಿಎಂಸಿ
- ಇಂದಿನ ಸಾಂದ್ರತೆ – 25.085 ಟಿಎಂಸಿ
- ಒಳ ಹರಿವು – 8,425 ಕ್ಯೂಸೆಕ್
- ಹೊರ ಹರಿವು – 567 ಕ್ಯೂಸೆಕ್
ಕಳೆದ ವರ್ಷ ಇದೇ ದಿನ ಜಲಾಶಯದ ಮಟ್ಟ 78.4 ಅಡಿಗಳಷ್ಟಿತ್ತು, ಕಳೆದ ಒಂದು ವಾರದ ಹಿಂದೆ ಅಂದರೆ ಜೂನ್ 28ರಂದು ಜಲಾಶಯದ ಮಟ್ಟ 90.28 ಅಡಿ ಇತ್ತು. ಕಾವೇರಿ ನದಿಯ ಜಲಾನಯನ ಪ್ರದೇಶವಾಗಿರುವ ಭಾಗಮಂಡಲ ಸೇರಿದಂತೆ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಜಲಾಶಯದ ಮಟ್ಟ ಏರಿಕೆಯಾಗಿದೆ. ಭಾಗಮಂಡಲ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 211 ಮಿಮೀ ಮಳೆ ದಾಖಲಾಗಿದ್ದು, ಕೊಡಗಿನ ಹಲವು ಭಾಗಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ : ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ – ಕೊಲೆ ಮಾಡಿ ಆಗುಂಬೆ ಅರಣ್ಯದಲ್ಲಿ ಮೃತದೇಹ ಎಸೆದ ಪ್ರಿಯಕರ..!