ಮಡಿಕೇರಿ : ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಂತೂ ಅನಾಹುತಗಳು ಸಂಭವಿಸಿದೆ. ಅದರಂತೆ ಕೊಡಗು ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಪ್ರಸಿದ್ದ ಭಾಗಮಂಡಲದ ಭಗಂಡೇಶ್ವರ ದೇಗುಲದ ಆವರಣಕ್ಕೆ ಕಾವೇರಿ ನೀರು ನುಗ್ಗಿದೆ. ದೇಗುಲದ 2 ಮೆಟ್ಟಿಲುವರೆಗೆ ಸುಜೋತಿ ನದಿ ತುಂಬಿ ಹರಿಯುತ್ತಿದೆ.
ಜೊತೆಗೆ ಮಡಿಕೇರಿ, ನಾಪೋಕ್ಲು ಮತ್ತು ಭಾಗಮಂಡಲ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಸಾರ್ವಜನಿಕರ ಹಾಗೂ ವಾಹನಗಳ ಓಡಾಟಕ್ಕೆ ನೂತನ ಫ್ಲೈ ಓವರ್ ಬಳಕೆ ಮಾಡಲಾಗಿದೆ.
ಇತ್ತ ವಿರಾಜಪೇಟೆ ಪಟ್ಟಣದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪಟ್ಟಣದ ಮಾರುಕಟ್ಟೆ ಪ್ರದೇಶದ ರಾಜಕಾಲುವೆ ಹಾಗೂ ವಿರಾಜಪೇಟೆ-ಸಿದ್ದಾಪುರ ರಸ್ತೆಯಲ್ಲಿ ಪ್ರವಾಹ ಉಂಟಾಗಿದೆ. ಇನ್ನು ಮಲೆತಿರಿಕೆ ಬೆಟ್ಟದಿಂದ ನೀರು ಹರಿದು ಬರುತ್ತಿರುವುದರಿಂದ ಬೆಟ್ಟದ ತಪ್ಪಲಿನ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.
ಇದನ್ನೂ ಓದಿ : ಏಷ್ಯಾಕಪ್ : ಇಂದು ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಕದನ – ಪಂದ್ಯ ಎಷ್ಟು ಗಂಟೆಗೆ? ಉಚಿತವಾಗಿ ನೋಡುವುದೇಗೆ?
Post Views: 184