ಬೆಂಗಳೂರು : ಕೊಳೆ ಬಟ್ಟೆ ಧರಿಸಿದ್ದ ರೈತರೊಬ್ಬರಿಗೆ ಮೆಟ್ರೋ ನಿಲ್ದಾಣದೊಳಗೆ ಬಿಡದೇ ಭದ್ರತಾ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಮಾನವ ಹಕ್ಕುಗಳ ಆಯೋಗದಿಂದ BMRCLಗೆ ನೋಟಿಸ್ ಜಾರಿಯಾಗಿದೆ. ವ್ಯಕ್ತಿಯ ಬಟ್ಟೆ ಆಧಾರದ ಮೇಲೆ ಸಾರ್ವಜನಿಕ ಸಾರಿಗೆಯಲ್ಲಿ ನಿರ್ಬಂಧಿಸುವಂತಿಲ್ಲ,
ಪ್ರವೇಶ ಅವಕಾಶ ನಿರಾಕರಣೆ ಮಾಡಿರುವುದು ಮಾನವ ಹಕ್ಕು ಉಲ್ಲಂಘನೆಯಾಗಿದೆ. ಈ ಘಟನೆ ಬಗ್ಗೆ ವರದಿ ನೀಡುವಂತೆ BMRCL ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಯಾಗಿದೆ.
ನಾಲ್ಕು ವಾರದಲ್ಲಿ ವರದಿ ಕೊಡಲು ಮಾನವ ಹಕ್ಕು ಆಯೋಗ ಸೂಚನೆ ನೀಡಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಪ್ರವೇಶ ನಿರಾಕರಿಸಿದ ಪ್ರಕರಣ ಸೋಷಿಯಲ್ ಮೀಡಿಯಾ ಸೇರಿ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸಂಬಂಧ ಭದ್ರತಾ ಸೂಪರ್ವೈಸರ್ನ್ನು BMRCL ವಜಾ ಮಾಡಿದೆ.
ಇದನ್ನೂ ಓದಿ : ನೆಲಮಂಗಲದಲ್ಲಿ ಕುಖ್ಯಾತ ಮನೆಗಳ್ಳ ಅರೆಸ್ಟ್ : ಬರೋಬ್ಬರಿ 25 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!