ಬೆಂಗಳೂರು : ರಾಜ್ಯಸಭೆಯ 4 ಸ್ಥಾನಗಳಿಗೆ ಇಂದು ಬೆಳಿಗ್ಗೆ 9ಗಂಟೆಯಿಂದ ಮತದಾನ ಆರಂಭವಾಗಿದೆ. ಈವರೆಗೆ 60ಕ್ಕೂ ಹೆಚ್ಚು ಶಾಸಕರು ಮತ ಚಲಾಯಿಸಿದ್ದಾರೆ.
ಬಿಜೆಪಿಯ 45 ಶಾಸಕರಿಂದ ವೋಟಿಂಗ್ ಆಗಿದ್ದು, ಕಾಂಗ್ರೆಸ್ನ 10 ಶಾಸಕರು, ಜೆಡಿಎಸ್ನ 8 ಮಂದಿ ಮತ ಚಲಾಯಿಸಿದ್ದಾರೆ. ಒಬ್ಬೊಬ್ಬರಾಗಿ ಬಂದು ಶಾಸಕರು ಮತದಾನ ಚಲಾಯಿಸುತ್ತಿದ್ದಾರೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷನಾಯಕ ಅಶೋಕ್,ಮಾಜಿ ಸಚಿವ ಕೆ.ಗೋಪಾಲಯ್ಯ, ಸುರೇಶ್ ಕುಮಾರ್ ಸೇರಿ ಹಲವರ ವೋಟಿಂಗ್ ಆಗಿದೆ.
ಜೆಡಿಎಸ್ನಿಂದ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶಂಪೂರ್ ಮತದಾನ ಮಾಡಿದ್ದು, ಕಾಂಗ್ರೆಸ್ನಿಂದ M.B.ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಗೃಹ ಸಚಿವ ಡಾ.ಜಿ.ಪರಮೇಶ್ವರ್. ಕೆ.ಜೆ.ಜಾರ್ಜ್ ಮತ ಚಲಾಯಿಸಿದ್ದಾರೆ.
ಕಾಂಗ್ರೆಸ್ನಿಂದ ಅಜಯ್ ಮಾಕೇನ್, ಸಯ್ಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್ ರಾಜ್ಯಸಭೆ ಕಣದಲ್ಲಿದ್ದಾರೆ. ಬಿಜೆಪಿಯಿಂದ ನಾರಾಯಣ ಭಾಂಡಗೆ ಸ್ಪರ್ಧೆಗಿಳಿದಿದ್ದು, ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಇಂದು ಮತ್ತು ನಾಳೆ ಕಾವೇರಿ ನೀರಿನ ಪೂರೈಕೆ ಸ್ಥಗಿತ..!