Download Our App

Follow us

Home » ರಾಜಕೀಯ » ರಾಜ್ಯಸಭೆ ಚುನಾವಣೆ – ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು, 1 ಸ್ಥಾನ ಬಿಜೆಪಿಗೆ, ಮೈತ್ರಿಗೆ ಸೋಲು..!

ರಾಜ್ಯಸಭೆ ಚುನಾವಣೆ – ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು, 1 ಸ್ಥಾನ ಬಿಜೆಪಿಗೆ, ಮೈತ್ರಿಗೆ ಸೋಲು..!

ಬೆಂಗಳೂರು : ರಾಜ್ಯಸಭೆ ಚುನಾವಣೆ ರಿಸಲ್ಟ್​​​ ಅನೌನ್ಸ್ ಆಗಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಸ್ಪರ್ಧಿಸಿದ್ದ ಅಜಯ್​ ಮಾಕೇನ್​, ಸೈಯ್ಯದ್ ನಾಸೀರ್​ ಹುಸೇನ್​, ಜಿ.ಸಿ ಚಂದ್ರಶೇಖರ್​​ ಅವರು ಗೆಲುವು ಸಾಧಿಸಿ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. ಬಿಜೆಪಿಯ ಮೊದಲ ಅಭ್ಯರ್ಥಿ ನಾರಾಯಣ ಸಾ ಬಾಂಡಾಗೆ ಜಯಗಳಿಸಿದ್ದು, ಮೈತ್ರಿ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹೀನಾಯ ಸೋಲನುಭವಿಸಿದ್ದಾರೆ.

ಯಾರಿಗೆ ಎಷ್ಟು ಮತ?

  1. ಕಾಂಗ್ರೆಸ್ – ಅಜಯ್​ ಮಾಕೇನ್ – 47
  2. ಕಾಂಗ್ರೆಸ್ – ಸೈಯ್ಯದ್ ನಾಸೀರ್​ ಹುಸೇನ್  – 47
  3. ಕಾಂಗ್ರೆಸ್ – ಜಿ.ಸಿ ಚಂದ್ರಶೇಖರ್ – 46
  4. ಬಿಜೆಪಿ – ನಾರಾಯಣ ಸಾ ಬಾಂಡಾಗೆ – 47
  5. ಜೆಡಿಎಸ್ – ಕುಪೇಂದ್ರ ರೆಡ್ಡಿ – 36

ರಾಜ್ಯಸಭಾ ಚುನಾವಣೆಯ ತಂತ್ರಗಾರಿಕೆ ರೂಪಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ. ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್ ಹೊರತುಪಡಿಸಿ ಎಲ್ಲಾ ಶಾಸಕರು ಇಂದು ಮತದಾನದಲ್ಲಿ ಭಾಗಿಯಾಗಿದ್ದರು. ಬಿಜೆಪಿ ನಾಯಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದರು.    ಇದೀಗ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಮೂರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ನಾರಾಯಣ ಸಾ ಬಾಂಡಾಗೆ ಅವರು 47 ಮತ ಪಡೆದು ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಜೆಡಿಎಸ್​​ನ ಕುಪೇಂದ್ರ ರೆಡ್ಡಿ ಅವರು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 10 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ನಾರಾಯಣ ಸಾ ಬಾಂಡಗೆ

ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಸಂಜೆ 5 ಗಂಟೆಯಿಂದ ವಿಧಾನಸೌದದ ಕೊಠಡಿ ಸಂಖ್ಯೆ 106ರಲ್ಲಿ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿತ್ತು. ಒಟ್ಟು 223 ಮತಗಳ ಪೈಕಿ 222 ಶಾಸಕಕರು ತಮ್ಮ ಮತದಾನ ಮಾಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್​ ಮತದಾನಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ  ಶೇ.99.5ರಷ್ಟು ಮತದಾನವಾಗಿದೆ. ಕಾಂಗ್ರೆಸ್‌ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್‌ನ 19 ಶಾಸಕ ಸಹ ಮತದಾನ ಮಾಡಿದ್ದಾರೆ. ಯಶವಂತಪುರ ಬಿಜೆಪಿ ಎಸ್​​ಟಿ ಸೋಮಶೇಖರ್ ಸ್ವಪಕ್ಷದ ಅಭ್ಯರ್ಥಿ ಬದಲಿಗೆ ಕಾಂಗ್ರೆಸ್​ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಇನ್ನು ಶಾಸಕ ಶಿವರಾಮ್ ಹೆಬ್ಬಾರ್​ ಮತದಾನಕ್ಕೆ ಗೈರಾಗಿದ್ದರು. ಈ ಮೂಲಕ ಇಬ್ಬರು ಕೂಡ ಬಿಜೆಪಿ ಶಾಕ್ ಕೊಟ್ಟಿದ್ದಾರೆ.

ಇದನ್ನೂ ಓದಿ : ಗಗನಯಾನ ಮಿಷನ್ ​​- ಭಾರತದಿಂದ ಬಾಹ್ಯಾಕಾಶಕ್ಕೆ ಹಾರಲಿರುವ 4 ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here