ಬೆಂಗಳೂರು : ಇಂದು ದೇಶದೆಲ್ಲೆಡೆ ರಂಜಾನ್ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಸಹಸ್ರಾರು ಮಂದಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಬೃಹತ್ ಮೈದಾನ, ನಂದಿದುರ್ಗ ರಸ್ತೆಯ ಮೈದಾನದಲ್ಲಿ ಬೃಹತ್ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ.
ಕೇರಳದಲ್ಲಿ ಚಂದ್ರ ಗೋಚರಿಸಿದ ಹಿನ್ನೆಲೆಯಲ್ಲಿ ನಿನ್ನೆಯೇ ಕರಾವಳಿ ಭಾಗದಲ್ಲಿ ಹೊಸ ಉಡುಪು ಧರಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸಿಹಿ ತಿಂದು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗಿತ್ತು. ಇದೀಗ ಬೆಂಗಳೂರು ಸೇರಿದಂತೆ ಬಹುತೇಕ ಭಾಗದಲ್ಲಿ ಹಬ್ಬದ ಆಚರಣೆ ಮಾಡಲಾಗುತ್ತಿದೆ.
ಈದ್ಗಾ ಮೈದಾನ ಸುತ್ತಮುತ್ತ ಪೊಲೀಸ್ ಭದ್ರತೆ: ರಂಜಾನ್ ಹಿನ್ನೆಲೆ ಬೆಂಗಳೂರಿನ ಚಾಮರಾಚಪೇಟೆಯಲ್ಲಿರೋ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಮುಸ್ಲಿಂ ಬಾಂಧವರು ನಮಾಜ್ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತಮುತ್ತ ಒಬ್ಬ ಡಿಸಿಪಿ ಹಾಗೂ ನಾಲ್ಕು ಮಂದಿ ಎಸಿಪಿ ಎರಡು ಕೆಎಸ್ಆರ್ಪಿ ತುಕಡಿ ಸೇರಿ ಮುನ್ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ :ಮುನಿರತ್ನಗೆ ಠಕ್ಕರ್ ಕೊಡಲು ಆರ್.ಆರ್ ನಗರಕ್ಕೆ ಡಿಕೆಶಿ ಎಂಟ್ರಿ – ಸೋದರ ಡಿ.ಕೆ.ಸುರೇಶ್ ಗೆಲ್ಲಿಸಲು ಮೆಗಾ ಪ್ಲಾನ್..!