ಬೆಂಗಳೂರು : ಜಿಪ್ಲೈನ್ ಆಡಲು ಹೋಗಿ ಮಹಿಳೆ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ ಜಂಗಲ್ ಟ್ರೈಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ನಿವಾಸಿ ರಂಜಿನಿ (35) ಮೃತರು. ರಜಾ ದಿನ ಕಳೆಯಲು ರಂಜಿನಿ 18 ಮಂದಿಯೊಂದಿಗೆ ಜಂಗಲ್ ಟ್ರೈಯಲ್ಸ್ ರೆಸಾರ್ಟ್ಗೆ ಆಗಮಿಸಿದ್ದರು. ಜಿಪ್ ಲೈನ್ ಆಡುವಾಗ ಕೇಬಲ್ ತುಂಡಾಗಿದ್ದರಿಂದ ಮಹಿಳೆ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ರಂಜಿನಿ ಜೆಪಿ ನಗರದ ಮಿಲನ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡ್ತಿದ್ದರು.
ರೆಸಾರ್ಟ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ರಂಜಿನಿ ಸಂಬಂಧಿಕರು ಆರೋಪಿಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೋಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದು ಎನ್ನವವರನ್ನು ಅರೆಸ್ಟ್ ಮಾಡಿದ್ದಾರೆ.
ರೆಸಾರ್ಟ್ ಮಾಲೀಕನ ಮೇಲೆ ಕ್ರಮ ಏಕಿಲ್ಲ? ರೆಸಾರ್ಟ್ ಮಾಲೀಕರ ಅಜಾಗರೂಕತೆ, ನಿರ್ಲಕ್ಷ್ಯದಿಂದಲೇ ರಂಜಿನಿ ಸವಾನಪ್ಪಿದ್ದಾರೆ. ಕ್ರೀಡಾ ಸುರಕ್ಷತಾ ನಿಯಮ ಪಾಲಿಸದ ಕಾರಣ ಈ ಘಟನೆ ನಡೆದಿದೆ. ಬಹುತೇಕ ರೆಸಾರ್ಟ್, ಹೋಂ ಸ್ಟೇಗಳಲ್ಲಿ ರೂಲ್ಸ್ ಪಾಲನೆ ಆಗ್ತಾ ಇಲ್ಲ. ಬೆಂಗಳೂರು ಹೊರ ವಲಯದಲ್ಲಿ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳು ತಲೆ ಎತ್ತಿವೆ. ಯಾವುದೇ ಸೇಫ್ಟಿ ಕ್ರಮಗಳಿಲ್ಲದೇ ಅಲ್ಲಿ ಚಟುವಟಿಕೆ ನಡೆಸಲಾಗ್ತಿದೆ. ಅಪಾಯಕಾರಿ ಕ್ರೀಡೆಗಳಲ್ಲಿ ತರಬೇತಿ ಇರುವ ಸಿಬ್ಬಂದಿ ನಿಯೋಜನೆ ಆಗಿಲ್ಲ. ರಾಮನಗರದ ಒಂದರಲ್ಲೇ 32 ಹೋಂ ಸ್ಟೇ, 9 ರೆಸಾರ್ಟ್ ಇವೆ. ಪ್ರವಾಸೋದ್ಯಮ ಇಲಾಖೆ ಅನುಮತಿ ಇದ್ರೂ, ಕ್ರೀಡಾ ಚಟುವಟಿಕೆಗೆ ಅನುಮತಿ ಇಲ್ಲ. ಮಹಿಳೆ ಮೃತಪಟ್ಟ ಹೋಂ ಸ್ಟೇಗೆ 10 ದಿನಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಕ್ರೀಡಾ ಚಟುವಟಿಕೆ ಬಗ್ಗೆ ಅಗತ್ಯ ಮಾಹಿತಿ ಒದಗಿಸಲು ಕೇಳಲಾಗಿತ್ತು. ಸದ್ಯ ಈ ಘಟನೆ ಸಂಬಂಧ ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದು ಎನ್ನವವರನ್ನು ಅರೆಸ್ಟ್ ಮಾಡಲಾಗಿದೆ. ರೆಸಾರ್ಟ್ ಮಾಲೀಕನ ಮೇಲೆ ಕ್ರಮ ಏಕಿಲ್ಲ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Post Views: 2,451