Download Our App

Follow us

Home » ಸಿನಿಮಾ » “ರಾಮರಸ” ಚಿತ್ರತಂಡದಿಂದ ಅದ್ದೂರಿ ಗಣೇಶೋತ್ಸವ – ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

“ರಾಮರಸ” ಚಿತ್ರತಂಡದಿಂದ ಅದ್ದೂರಿ ಗಣೇಶೋತ್ಸವ – ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

ಗುರು ದೇಶಪಾಂಡೆ ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ನಾಯಕನಾಗಿ ನಟಿಸುತ್ತಿರುವ ‘ರಾಮರಸ’ ಚಿತ್ರತಂಡದಿಂದ ಅದ್ದೂರಿಯಾಗಿ ನಾಗರಭಾವಿಯ ಜಿ ಅಕಾಡೆಮಿಯಲ್ಲಿ ಗಣೇಶೋತ್ಸವ ಆಚರಿಸಲಾಯಿತು.

ಬೆಳಗ್ಗೆ ಗಣಪತಿಯನ್ನು ತಂದು ವೈಭವವಾಗಿ ಪೂಜಿಸಿ ಆನಂತರ ಸಂಜೆ ಅಷ್ಟೇ ವೈಭವವಾಗಿ ವಿಸರ್ಜನೆಯನ್ನು ಮಾಡಲಾಯಿತು‌. ನಿರ್ಮಾಪಕ ಗುರು ದೇಶಪಾಂಡೆ, ನಿರ್ದೇಶಕ ಗಿರಿರಾಜ್, ನಾಯಕ ಕಾರ್ತಿಕ್ ಮಹೇಶ್ ಹಾಗೂ ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತು ಈ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪೂಜಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

‘ನಾವು ಯಾವುದೇ ಒಂದು ಕೆಲಸ ಆರಂಭ ಮಾಡಬೇಕಾದರೂ ಗಣೇಶನ ಪೂಜೆ ಮಾಡೇ ಆರಂಭ ಮಾಡುತ್ತೇವೆ. ಗಣೇಶ ಆಧಿಪೂಜಿತ. ಈ ಬಾರಿ ನಮ್ಮ “ರಾಮರಸ” ತಂಡದಿಂದ ಅದ್ದೂರಿಯಾಗಿ ಗಣೇಶನ ಪೂಜೆ ನೆರವೇರಿಸಲಾಯಿತು. ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಮ್ಮ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸೆಪ್ಟೆಂಬರ್ 12 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ. ಎರಡನೇ ಹಂತದ ಚಿತ್ರೀಕರಣಕ್ಕೂ ಮುನ್ನ ಗಣಪತಿ ಪೂಜೆ ಮಾಡಿರುವುದು ನಮ್ಮ ತಂಡದ ಎಲ್ಲರಿಗೂ ಸಂತೋಷವಾಗಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು‌.

‘ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ ನಿರ್ದೇಶನ, ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ, ಅರ್ಜುನ್‍ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆಯಿರುವ ಈ‌ ಚಿತ್ರದ ಕಾರ್ಯಕಾರಿ ನಿರ್ಮಾಪಕರು‌ ಸುನೀಲ್ ಹೆಚ್ ಸಿ ಗೌಡ.

ಇದನ್ನೂ ಓದಿ : “ರಾವುತ” ಸಿನಿಮಾದ ಸಾಂಗ್ಸ್ ರಿಲೀಸ್ – ಚಿತ್ರತಂಡಕ್ಕೆ ಶುಭಕೋರಿದ ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here